ಕೊಂಡೆವೂರು ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ 21ರಿಂದ

ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು 21ನೇ ಚಾತುರ್ಮಾಸ್ಯ ವ್ರತಸಂಕಲ್ಪವನ್ನು ಈ ತಿಂಗಳ 21ರಂದು ಕೊಂಡೆವೂರು ಮಠದಲ್ಲಿ ಕೈಗೊಳ್ಳಲಿ ದ್ದಾರೆ. ಆ ದಿನ ಬೆಳಿಗ್ಗೆ 9.00ಕ್ಕೆ ಗಣಹೋಮ, ಶ್ರೀ ನಿತ್ಯಾನಂದ ಗುರುದೇವರಿಗೆ ಪಂಚಾಮೃತಾಭೀಷೇಕ, ಸೀಯಾಳಾಭೀಷೇಕ, 10.30 ಕ್ಕೆ ವ್ಯಾಸಪೂಜೆ ಆರಂಭವಾಗಿ 12ಕ್ಕೆ ಮಂಗಳಾರತಿ, 12.30ಕ್ಕೆ ಮಹಾಪೂಜೆ ನಂತರ ಅನ್ನ ಸಂತರ್ಪಣೆ ನಡೆಯಲಿದೆ. ಸಾಯಂಕಾಲ 7ಕ್ಕೆ ಶ್ರೀ ಗುರುಪಾದುಕಾ ಪೂಜೆ, ಭಜನೆ ನಂತರ ಸತ್ಸಂಗ ನಡೆಯಲಿದೆ. ಸೆ. 18ರಂದು ಸಂಪನ್ನಗೊಳ್ಳಲಿರುವ ಚಾತುರ್ಮಾಸ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಪ್ರತಿದಿನ ಸಂಜೆ 5.30 ರಿಂದ ವಿವಿಧ ಭಜನಾ ತಂಡಗಳಿAದ ಭಜನಾಸೇವೆ ನಡೆಯಲಿದ್ದು, ಪ್ರತೀ ಭಾನುವಾರ ವಿದ್ವಾಂಸರಿAದ ಪ್ರವಚನ, ಯಕ್ಷಗಾನ ತಾಳಮದ್ದಳೆ, ಭರತನಾಟ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

Leave a Reply

Your email address will not be published. Required fields are marked *

You cannot copy content of this page