ಕ್ವಾರ್ಟರ್ಸ್‌ನ ಮೇಲಿನಿಂದ ಬಿದ್ದು ವಲಸೆ ಕಾರ್ಮಿಕ ಮೃತಪಟ್ಟ ಸ್ಥಿತಿಯಲಿ ಪತ್ತೆ

ಸೀತಾಂಗೋಳಿ: ಕ್ವಾರ್ಟರ್ಸ್‌ನ ಮೇಲಿನಿಂದ ಬಿದ್ದು ವಲಸೆ ಕಾರ್ಮಿಕನೋರ್ವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸೀತಾಂಗೋಳಿಯಲ್ಲಿ ಸಂಭವಿಸಿದೆ.

ರಾಜಸ್ತಾನ ಬೋಡಗಾನ್ ನಿವಾಸಿ ಕೇಮ್ರಾಜ್ ಗುಜ್ಜರ್ (೪೩) ಮೃತಪಟ್ಟ ದುರ್ದೈವಿಯಾಗಿದ್ದಾರೆ.  ಕಳೆದ ೨೦ ವರ್ಷಗಳಿಂದ ಸೀತಾಂಗೋಳಿಯಲ್ಲಿ ಗ್ರಾನೈಟ್ ಮಾರ್ಬಲ್ ಕೆಲಸ ನಿರ್ವಹಿಸುತ್ತಿದ್ದ ಇವರು ಸೀತಾಂಗೋಳಿ ಪೇಟೆಯಲ್ಲಿ ರುವ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದರು.

ನಿನ್ನೆ ರಾತ್ರಿ ಇವರು ಕ್ವಾರ್ಟರ್ಸ್‌ನ ಮೇಲಿನ ಮಹಡಿಯಲ್ಲಿ ನಿದ್ರಿಸುತ್ತಿದ್ದರು. ಇಂದು ಮುಂಜಾನೆ ಜತೆಗಿದ್ದವರು ಎದ್ದು ನೋಡಿದಾಗ ಕೇಮ್ರಾಜ್ ಗುಜ್ಜರ್  ಕ್ವಾರ್ಟರ್ಸ್‌ನ ಕೆಳಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ರಾತ್ರಿ ಅಥವಾ ಮುಂಜಾನೆ ವೇಳೆ ಎಚ್ಚೆತ್ತ ಕೇಮ್ರಾಜ್ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ.

ಕೇಮ್ರಾಜ್‌ನ ಸಹೋದರ ಎಮ್ರಾಜ್ ಕೂಡಾ ಸೀತಾಂಗೋಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು ಇವರು ಜತೆಯಾಗಿ ವಾಸಿಸುತ್ತಿದ್ದರು.  ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ.

ರಾಮ್ ಸಹಾಯಿ-ರೂಪೊ ದಂಪತಿಯ ಪುತ್ರನಾದ ಮೃತರು ಇತರ ಸಹೋದರರಾದ ಮಾನ್‌ಸಿಂಗ್, ಪ್ರೇಮ್ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You cannot copy content of this page