ಚೆರ್ಕಳದಲ್ಲಿ ಪೊಲೀಸ್ ಕಾರ್ಯಾಚರಣೆ: ನಿಷೇಧಿತ ಪಾನ್‌ಮಸಾಲೆ ವಶ

ಕಾಸರಗೋಡು: ವಿದ್ಯಾ ನಗರದಲ್ಲಿ ಎಸ್‌ಐ ವಿಜಯನ್ ಮೇಲೋತ್ತ್‌ರ ನೇತೃತ್ವದ ವಿದ್ಯಾನಗರ ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳದಲ್ಲಿ ನಿಷೇಧ ಹೇರಲಾದ ೮೨ ಪ್ಯಾಕೆಟ್ ತಂಬಾಕು ಉತ್ಪನ್ನ ಪತ್ತೆಹಚ್ಚಿ ವಶಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿ ಚೆರ್ಕಳದ ಅಂಗಡಿ ಯೊಂದರ ಕಾರ್ಮಿಕ ಶಾಫಿ ಬಿ. (೫೨) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಇದೇ ರೀತಿ ಕೊಲ್ಲಂಗಾನದಲ್ಲಿ ಪೊಲೀಸರು ನಡೆಸಿದ ಕಾರ್ಯಾ ಚರಣೆಯಲ್ಲಿ ೯೫ ಪ್ಯಾಕೆಟ್ ತಂಬಾಕು ಉತ್ಪನ್ನಗಳೊಂದಿಗೆ ಮಾಲಿಂಗ (೫೬) ಎಂಬಾತನನ್ನು ಸೆರೆ ಹಿಡಿದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED NEWS

You cannot copy contents of this page