ಜೂನ್ 15ರ ತನಕ ಧಾರಾಕಾರ ಮಳೆ

ತಿರುವನಂತಪುರ: ರಾಜ್ಯದಲ್ಲಿ ಈತಿಂಗಳ 15ರ ತನಕ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಯೆಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.  ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಆದ್ದರಿಂದ ಈ ಎರಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ. ಕೋಟ್ಟಯಂ, ಎರ್ನಾ ಕುಳಂ, ಇಡುಕ್ಕಿ, ತೃಶೂರು, ಪಾಲಕ್ಕಾಡ್, ಮಲಪ್ಪುರಂ, ಕಲ್ಲಿಕೋಟೆ ಮತ್ತು ವಯನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು ಅದರ ಪರಿಣಾಮ ಕೇರಳದಲ್ಲಿ ಮುಂದಿನ ದಿನಗಳಲ್ಲಿ ಜಡಿ ಮಳೆ ಸುರಿಯುವ ಸಾಧ್ಯತೆ ಇದೆಯೆಂದು ಇಲಾಖೆ ತಿಳಿಸಿದೆ. 

Leave a Reply

Your email address will not be published. Required fields are marked *

You cannot copy content of this page