ಜೋಡುಕಲ್ಲು ರಸ್ತೆ ಬದಿಯಲ್ಲಿ ಒಣಗಿದ ಮರದಿಂದ ಅಪಾಯ ಭೀತಿ: ತೆರವುಗೊಳಿಸಲು ಆಗ್ರಹ
ಉಪ್ಪಳ: ಕೈಕಂಬ-ಬಾಯಾರು ರಸ್ತೆಯ ಜೋಡುಕಲ್ಲು ಎಂಬಲ್ಲಿ ಒಣಗಿದ ಮರಗಳು ಯಾವುದೇ ಕ್ಷಣದಲ್ಲಿ ಧರಾಶಾಯಿಗೊಳ್ಳುವ ಆತಂಕ ಎದುರಾಗಿದೆ. ಈ ರಸ್ತೆ ಅಭಿವೃದ್ದಿಗೊಳಿಸುವ ವೇಳೆ ಅಪಾಯದ ಸ್ಥಿತಿಯಲ್ಲಿರುವ ಮರಗಳನ್ನು ತೆರೆವುಗೊಳಿಸಲಾಗಿತ್ತು. ಆದರೆ ಒಣಗಿದ ಈ ಮರವನ್ನು ತೆರವುಗೊಳಿಸಿರಲಿಲ್ಲ. ಇದು ಈಗ ಭೀತ್ತಿಗೆ ಕಾರಣವಾಗಿದೆ. ಈ ಪರಿಸರದಲ್ಲಿ ಪ್ರಮುಖ ವಿದ್ಯುತ್ ತಂತಿಹೊAದಿರುವ ಕಂಬಗಳಿದ್ದು, ಮರ ಮುರಿದು ತಂತಿ ಮೇಲೆ ಬಿದ್ದಲ್ಲಿ ಹಲವಾರು ಕಂಬಗಳು ರಸ್ತೆಗೆ ಮುರಿದು ಬೀಳಬಹುದಾಗಿದೆ. ಜನನಿಬಿಡ ಪ್ರದೇಶದಲ್ಲಿ ಅಪಾಯದ ಸ್ಥಿತಿಯಲ್ಲಿರುವ ಒಣಗಿದ ಮರಗಳನ್ನು ತೆರವುಗೊಳಿಸಲು ಮಂಗಲ್ಪಾಡಿ ಪಂಚಾಯತ್ ಸದಸ್ಯೆ ಸುಜಾತ.ಯು ಶೆಟ್ಟಿ ಈಗಾಗಲೇ ರಸ್ತೆ ಅಭಿವೃದ್ದಿಯ ಗುತ್ತಿಗೆದಾರರ ಪೈವಳಿಕೆಯಲ್ಲಿರುವ ಕಚೇರಿಗೆ ಲಿಖಿತ ಮನವಿಯನ್ನು ನೀಡಿದ್ದಾರೆ. ಅಪಾಯದ ಸ್ಥಿತಿಯಲ್ಲಿರುವ ಒಣಗಿದ ಮರವನ್ನು ಕೂಡಲೇ ತೆರವುಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.