ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರಿ ಸಂಗಮ
ಕಾಸರಗೋಡು: ಸಹಕಾರ ಭಾರತಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಕಾಸರಗೋಡು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಜಿಲ್ಲೆಯ ಸಹಕಾರಿಗಳ ಸಹಕಾರಿ ಸಂಗಮ ನಡೆಯಿತು. ಸಹಕಾರ ಭಾರತಿ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಡಾ. ಉದಯ್ ಜೋಶಿ ಉದ್ಘಾಟಿಸಿ ಮಾತನಾಡಿ ದರು. ಸಹಕಾರ ಭಾರತಿ ಈ ದೇಶದಲ್ಲಿ ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ರೀತಿಯಲ್ಲಿ ಕಾರ್ಯ ನಡೆಸುತ್ತಿದ್ದು ಮುನ್ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸಹಕಾರ ಭಾರತೀಯ ಎಲ್ಲ ನಿರ್ದೇಶಗಳನ್ನು ಅಂಗೀಕರಿಸಿದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸಮಿತಿ ಸದಸ್ಯರಾದ ಕರುಣಾಕರನ್ ನಂಬಿಯಾರ್, ರಾಜ್ಯ ಉಪಾಧ್ಯಕ್ಷ ಐತ್ತಪ್ಪ ಮವಾರ್, ಮಹಿಳಾ ಕೋ ಆಪರೇಟಿವ್ ಸೆಲ್ನ ಶ್ಯಾಮಲ ಪತ್ತಡ್ಕ ಮಾತನಾಡಿದರು. ಸಹಕಾರ ಭಾರತಿ ಜಿಲ್ಲಾ ಅಧ್ಯಕ್ಷ ಗಣೇಶ್ ಪಾರಕಟ್ಟ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ತಾಲೂಕು ಅಧ್ಯಕ್ಷ ಪದ್ಮರಾಜ್ ಪಟ್ಟಾಜೆ ಸ್ವಾಗತಿಸಿ ಸಂಘಟನಾ ಕಾರ್ಯದರ್ಶಿ ಎಸ್ ಎನ್ ಭಟ್ ಕಿದೂರು ವಂದಿಸಿದರು.