ನುಳ್ಳಿಪ್ಪಾಡಿ ಕ್ಷೇತ್ರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ 15ರಂದು
ಕಾಸರಗೋಡು: ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವ ಸಮಾಲೋಚನಾ ಸಭೆ ಹಾಗೂ ಸಮಿತಿ ರೂಪೀಕರಣ ಸಭೆ ಈ ತಿಂಗಳ 15ರಂದು ಸಂಜೆ 3 ಗಂಟೆಗೆ ಕ್ಷೇತ್ರ ಪರಿ ಸರದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ಉಳಿ ಯತ್ತಾಯ ವಿಷ್ಣು ಆಸ್ರ ಉಪಸ್ಥಿತರಿ ರುವರು. 2011ರಲ್ಲಿ ನವೀಕರಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜರಗಿದ್ದು, ಮುಂದಿನ ಬ್ರಹ್ಮಕಲಶ 2026 ಎಪ್ರಿಲ್ನಲ್ಲಿ ನಡೆಸಲು ತೀರ್ಮಾನಿಸಲಾ ಗಿದ್ದು, ಸಭೆಯನ್ನು ಯಶಸ್ವಿ ಗೊಳಿಸಬೇಕೆಂದು ಪದಾಧಿಕಾರಿಗಳು ವಿನಂತಿಸಿದ್ದಾರೆ.