ನೇತ್ರಾವತಿ ಸೇತುವೆ ಬಳಿ ಅಪಘಾತ:  ಬೈಕ್ ಸವಾರ ವಿದ್ಯಾರ್ಥಿ ಮೃತ್ಯು

ತಲಪಾಡಿ: ಉಳ್ಳಾಲ ನೇತ್ರಾವತಿ ಸೇಸುವೆ ಸಮೀಪ ಸಂಭವಿಸಿದ ಬೈಕ್ ಅಪಘಾತದಲ್ಲಿ ವಿದ್ಯಾರ್ಥಿ ಮೃತಪಟ್ಟನು. ಗಂಭೀರ ಗಾಯಗೊಂಡ ಸಹ ಸವಾರನನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.  ಕೋಣಾಜೆಯ ಖಾಸಗಿ ಕಾಲೇಜಿನ  ವಿದ್ಯಾರ್ಥಿಗಳಾದ ಬಂಟ್ವಾಳ ಟಿಪ್ಪುನಗರ ನಿವಾಸಿ ಸಲ್ಮಾನ್ ಹಾರೀಸ್ (19) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತನ ಜೊತೆಯಲ್ಲಿ ಸಂಚರಿಸುತ್ತಿದ್ದ ಮುಹಮ್ಮದ್ ಶಕೀಲ್ (19) ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾನೆ. ನಿನ್ನೆ ಸಂಜೆ ಅಪಘಾತ ಸಂಭವಿಸಿದೆ. ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ನೇತ್ರಾವತಿ ಸೇತುವೆ ಬಳಿ ತಾತ್ಕಾಲಿಕ ಡಿವೈಡರ್‌ಗೆ ಢಿಕ್ಕಿ ಹೊಡೆದು ಇವರಿಬ್ಬರೂ ರಸ್ತೆಗೆಸೆಯಲ್ಪಟ್ಟಿದ್ದರು. ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹ ಸವಾರನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED NEWS

You cannot copy contents of this page