ಪಂಚಾಯತ್ ಬಾವಿಯ ನೀರು ಕಲುಷಿತ:  ಅಂಗನವಾಡಿ, ಕಾಲನಿ ನಿವಾಸಿಗಳಿಗೆ ಸಂಕಷ್ಟ

ಮಂಜೇಶ್ವರ: ಮಂಜೇಶ್ವರ ಪಂಚಾಯತ್ ವ್ಯಾಪ್ತಿಯಲ್ಲಿರುವ ೨ನೇ ವಾರ್ಡ್‌ನ ತೂಮಿನಾಡು ಅಂಗನವಾಡಿ ಪಕ್ಕದಲ್ಲಿರುವ ಬಾವಿಯೊಂದು ತ್ಯಾಜ್ಯ ತುಂಬಿ ಕಲುಷಿತಗೊಂಡಿದೆ. ಸಂಬಂಧಪಟ್ಟವರು ಬಾವಿಯನ್ನು ಶುದ್ಧೀಕರಿಸದೆ ಇರುವುದು ಆತಂಕಕ್ಕೆ ಕಾರಣವಾಗಿದೆ. ಕಲುಷಿತಗೊಂಡ ಈ ನೀರನ್ನು ಅಂಗನವಾಡಿ ಮಕ್ಕಳು ಸಹಿತ ಈ ಕಾಲನಿಯಲ್ಲಿರುವವರು ಉಪಯೋಗಿಸುತ್ತಿದ್ದಾರೆ. ಪಂಚಾಯತ್ ಅಧಿಕಾರಿ ಗಳು ಈ ಬಗ್ಗೆ ಗಮನ ಹರಿಸದ ಹಿನ್ನೆಲೆಯಲ್ಲಿ ಅಂಗನವಾಡಿ ಮಕ್ಕಳು ಇದೇ ನೀರನ್ನು ಕುಡಿಯ ಬೇಕಾದ ಪರಿಸ್ಥಿತಿ ಎದುರಾಗಿದೆ. ಊರವರು ಈ ಬಗ್ಗೆ ಹಲವು ಸಲ ಸಂಬಂಧಪಟ್ಟವರನ್ನು ವಿನಂತಿಸಿಕೊಂಡರೂ ಯಾರೂ ಇತ್ತ ಕಡೆ ಗಮನ ಹರಿಸಿಲ್ಲವೆಂದು ಸ್ಥಳೀಯರು ಹೇಳುತ್ತಿದ್ದಾರೆ. ಈ ಬಾವಿಯ ನೀರಿನಲ್ಲಿ ಕಸ ಕಡ್ಡಿ ಹಾಗೂ ಕೆಸರು ತುಂಬಿಕೊಂಡಿದೆ. ಬಾವಿಯಲ್ಲಿರುವ ನೀರಿನಲ್ಲಿ ಹುಳಗಳು ಪ್ರತ್ಯಕ್ಷ ಸ್ಥಳೀಯರು ಆರೋಪಿಸಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಬಾವಿ ಇದೀಗ ಸಾಂಕ್ರಾಮಿಕ ರೋಗದ ಕೇಂದ್ರವಾಗಿ ಪರಿಣಮಿಸಿರುವುದಕ್ಕೆ ಸ್ಥಳೀಯರು ರೋಷ ವ್ಯಕ್ತಪಡಿಸಿದದಾರೆ.

Leave a Reply

Your email address will not be published. Required fields are marked *

You cannot copy content of this page