ಪತ್ರಕರ್ತ ರವಿ ನಾಯ್ಕಾಪುಗೆ ಗಡಿನಾಡ ಸಾಹಿತ್ಯಭೂಷಣ ಪ್ರಶಸ್ತಿ ಪ್ರದಾನ 27ರಂದು

ಬೆಂಗಳೂರು: ಬೆಂಗಳೂರು ತಾಯಿಬೇರು ಸಾಮಾಜಿಕ ಮತ್ತು ಸಾಂಸ್ಕೃತಿಕ ಯುವ ವೇದಿಕೆಯು ನೀಡುವ ಗಡಿನಾಡ ಸಾಹಿತ್ಯಭೂಷಣ ಪ್ರಶಸ್ತಿಗೆ ಪತ್ರಕರ್ತ ರವಿ ನಾಯ್ಕಾಪು ಆಯ್ಕೆಯಾಗಿದ್ದಾರೆ. ತಾಯಿಬೇರು ಸಾಮಾಜಿಕ ಮತ್ತು ಸಾಂಸ್ಕೃತಿಕ ಯುವ ವೇದಿಕೆ ಹಾಗೂ ಅಖಿಲ ಕರ್ನಾಟಕ ಸಾಹಿತಿ ಕಲಾವಿದರ ಒಕ್ಕೂಟದ ನೇತೃತ್ವದಲ್ಲಿ ಈ ತಿಂಗಳ 27ರಂದು ಬೆಂಗಳೂರಿನ ಗೆಜ್ಜೆನಾದ ಸ್ಟುಡಿಯೋ ಸಭಾಂಗಣದಲ್ಲಿ ನಡೆಯುವ ಕನ್ನಡ ಸಂಸ್ಕೃತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಕಾಸರಗೋಡಿನ ಪತ್ರಿಕಾರಂಗದಲ್ಲಿ ಹಾಗೂ ಸಾಹಿತ್ಯ ವಲಯದಲ್ಲಿ ಗೈದ ಸೇವೆಯನ್ನು ಪರಿಗಣಿಸಿ ರವಿ ನಾಯ್ಕಾಪುರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ, ಕರ್ನಾಟಕ ಜಾನಪದ ಪರಿಷತ್‌ನ ಕೇರಳ ಗಡಿನಾಡ ಘಟಕ ಪ್ರಧಾನ ಕಾರ್ಯದರ್ಶಿಯಾಗಿರುವ ರವಿ ನಾಯ್ಕಾಪು ಓರ್ವ ಉತ್ತಮ ನಿರೂಪಕರೂ ಆಗಿದ್ದಾರೆ. ಇವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕನ್ನಡ ಪತ್ರಕರ್ತರ ಸಂಘ, ವಿವಿಧ ಕನ್ನಡ ಸಂಘಟನೆಗಳು ಅಭಿನಂದಿಸಿವೆ.

Leave a Reply

Your email address will not be published. Required fields are marked *

You cannot copy content of this page