ಪೊಲೀಸರ ಮೇಲೆ ಹಲ್ಲೆ : ಆರೋಪಿಗೆ ೪ ತಿಂಗಳ ಸಜೆ
ಕಾಸರಗೋಡು: ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಹೊಸದುರ್ಗ ಸೌತ್ ಕೊವ್ವಲಿನ ನೌಶಾದ್ ಅಲಿಯಾಸ್ ಕಾರಾಟ್ ನೌಶಾದ್ (೩೫)ನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (೨)ದ ನ್ಯಾಯಾಧೀಶರಾದ ಟಿ. ಬಿಜು ಅವರು ನಾಲ್ಕು ತಿಂಗಳ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
೨೦೧೮ ಆಗಸ್ಟ್ ೨೦ರಂದು ರಾತ್ರಿ ಹೊಸದುರ್ಗ ರೈಲು ನಿಲ್ದಾಣದಲ್ಲಿ ದಾಂಧಲೆ ಸೃಷ್ಟಿಸಿದ್ದ ಆರೋಪಿ ಕಾರಾಟ್ ನೌಶಾದ್ನನ್ನು ಹೊಸದುರ್ಗ ಪೊಲೀಸರು ವಶಕ್ಕೆ ತೆಗೆದುಕೊಂಡು ಪೊಲೀಸ್ ಠಾಣೆಗೆ ಒಯ್ದಿದ್ದರು. ಆಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ನೋರ್ವನ ಮೇಲೆ ಇರಿದು ಗಾಯಗೊಳಿಸಿದ ದೂರಿನಂತೆ ಹೊಸದುರ್ಗ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಆ ಪ್ರಕರಣದಲ್ಲಿ ನ್ಯಾಯಾಲಯ ಆತನಿಗೆ ಶಿಕ್ಷೆ ವಿಧಿಸಿದೆ. ಅಂದು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿದ್ದ ಇ.ಜೆ. ಜೋಸೆಫ್ ಅವರು ಈ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರೋಸಿಕ್ಯೂಷನ್ ಪರವಾಗಿ ಹೆಚ್ಚುವರಿ ಪಬ್ಲಿಕ್ ಪ್ರೋಸಿಕ್ಯೂಟರ್ ಚಂದ್ರಮೋಹನ್ ನ್ಯಾಯಾಲಯದಲ್ಲಿ ವಾದಿಸಿದ್ದರು.