ಪ್ರಯಾಣ ಸಮಸ್ಯೆ ಪರಿಹಾರಕ್ಕೆ ಸಾರ್ವಜನಿಕ ಸಭೆ

ಕಾಸರಗೋಡು: ಪ್ರಯಾಣ ಸಮಸ್ಯೆಗಳಿಂದ ಬಳಲುತ್ತಿರುವ ಗ್ರಾಮಗಳಲ್ಲಿ ಸಾರಿಗೆ ಸೌಲಭ್ಯಗಳನ್ನು ಒದಗಿಸಿ ಹೊಸ ದಾರಿಗಳ ಬಗ್ಗೆ ಚರ್ಚಿಸಲು ಸಾರ್ವಜನಿಕ ಸಭೆ ನಡೆಯಲಿದೆ. ಕೇರಳ ಸರಕಾರದ 100 ದಿನಗಳ ಕಾರ್ಯಕ್ರಮದಂಗವಾಗಿ ವಿಧಾನಸಭಾ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ಸಭೆ ನಡೆಯಲಿದೆ.  ಕಲೆಕ್ಟರೇಟ್‌ನ ಸಮ್ಮೇಳನ ಸಭಾಂಗಣದಲ್ಲಿ ಕಾಸರಗೋಡು ವಿಧಾನಸಭಾ ಕ್ಷೇತ್ರದ ಸಭೆಯು ೫ರಂದು ಬೆಳಿಗ್ಗೆ 10.30ಕ್ಕೆ, ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಸಭೆ ಆಗಸ್ಟ್ 8ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಸಭೆಯಲ್ಲಿ ಪ್ರಯಾಣ ಸಮಸ್ಯೆ ಉಂಟಾಗಿರುವ ರೂಟ್‌ಗಳಲ್ಲಿ ಹೊಸ ಬಸ್ ಸಂಚಾರ ಬಗ್ಗೆ ಸಾರ್ವಜನಿಕರು, ಸ್ವಯಂ ಸೇವಾ ಸಂಸ್ಥೆಗಳು ತಮ್ಮ ನಿಲುವು ವ್ಯಕ್ತಪಡಿಸಬಹುದು. ಪಂಚಾಯತ್‌ಗೆ ಲಭಿಸಿದ ಮನವಿಗಳನ್ನು ಕ್ರೋಢೀಕರಿಸಿ ಸಭೆಯಲ್ಲಿ ಮಂಡಿಸಲಾಗುವುದು.

Leave a Reply

Your email address will not be published. Required fields are marked *

You cannot copy content of this page