ಬಂಟ್ವಾಳದ ಅಬ್ದುಲ್ ರಹೀಂ ಕೊಲೆ ಪ್ರಕರಣ: 15 ಮಂದಿ ವಿರುದ್ಧ ಕೇಸು ದಾಖಲು

ಮಂಗಳೂರು: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯ ಕೊಳತ್ತಮಜಲುನಲ್ಲಿ ನಿನ್ನೆ ಪಿಕಪ್ ವಾಹನ ಚಾಲಕ ಹಾಗೂ ಜುಮಾ ಮಸೀದಿ ಕಾರ್ಯದರ್ಶಿಯೂ ಆಗಿದ್ದ ಅಬ್ದುಲ್ ರಹೀಂ (32) ಎಂಬ ವರ ಮೇಲೆ ಮಾರಕಾಯುಧಗಳಿಂದ ಆಕ್ರಮಿಸಿ ಕೊಲೆಗೈದು ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬವರಿಗೆ ಗಾಯಗೊಳಿಸಿದ ಪ್ರಕರಣಕ್ಕೆ ಸಂಬAಧಿಸಿ ಬಂಟ್ವಾಳ ಗ್ರಾಮೀಣ ಪೊಲೀಸರು 15 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೊಹಮ್ಮದ್ ನಿಸಾರ್ ಎಂಬವರು ನೀಡಿದ ದೂರಿನ ಪ್ರಕಾರ ಬಿಎನ್ಎಸ್-103, 109, 118(1), 118(2), 190, 191(1), 191(2) ಮತ್ತು 191(3) ಅಡಿ ಪ್ರಕರಣ ದಾಖಲಿಸಲಾಗಿದೆ. ಅಬ್ದುಲ್ ರಹೀಂರ ಪರಿಚಯಸ್ಥರೇ ಆಗಿರುವ ದೀಪಕ್, ಸುಮಿತ್ ಸೇರಿ 15 ಮಂದಿಯ ವಿರುದ್ಧ ಈ ಪ್ರಕರಣ ದಾಖಲಿಸಲಾಗಿದೆ. ಅಬ್ದುಲ್ ರಹೀಂ ಮತ್ತು ಕಲಂದರ್ ಶಾಫಿ ಹೊಳೆ ಬದಿಯಿಂದ ಪಿಕಪ್ ವಾಹನದಲ್ಲಿ ಮರಳು ಲೋಡ್ ಮಾಡಿಕೊಂಡು ಇರಾಕೋಡಿಯ ರಾಜೀವಿ ಎಂಬವರ ಮನೆ ಬಳಿ ಮರಳು ಅನ್ಲೋಡ್ ಮಾಡುತ್ತಿದ್ದ ವೇಳೆ ಅವರ ಮೇಲೆ ದುಷ್ಕರ್ಮಿಗಳ ತಂಡ ಮಾರಕಾಯುಧಗಳೊಂದಿಗೆ ಎರಗಿ ಅಬ್ದುಲ್ ರಹೀಂರನ್ನು ಕೊಲೆಗೈದು ಕಲಂದರ್ ಶಾಫಿಯನ್ನು ಗಾಯಗೊಳಿಸಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಮೊಹಮ್ಮದ್ ನಿಸಾರ್ ಆರೋಪಿಸಿದ್ದಾರೆ.
ಈ ಕೊಲೆ ಪ್ರಕರಣದ ತನಿಖೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿಯವರ ನಿರ್ದೇಶ ಪ್ರಕಾರ ಡಿವೈಎಸ್ಪಿ ವಿಜಯ್ ಪ್ರಕಾಶ್ರ ನೇತೃತ್ವದಲ್ಲಿ 5 ಪೊಲೀಸ್ ತಂಡಗಳ ರಚನೆ ಮಾಡಲಾಗಿದೆ.
ಕೊಲೆ ಪ್ರಕರಣಕ್ಕೆ ಸಂಬAಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜ್ಯಾರಿಗೊಳಿಸಲಾಗಿದೆ ಮಾತ್ರವಲ್ಲ ಎಲ್ಲೆಡೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Leave a Reply

Your email address will not be published. Required fields are marked *

You cannot copy content of this page