ಬಾಂಗ್ಲಾದಲ್ಲಿ ಹಿಂದೂಗಳ ವಿರುದ್ಧ ಆಕ್ರಮಣ: ಕಾಸರಗೋಡಿನಲ್ಲಿ ಸಂಘ ಪರಿವಾರದಿಂದ ಪ್ರತಿಭಟನೆ

ಕಾಸರಗೋಡು: ಬಾಂಗ್ಲಾದಲ್ಲಿ ನಿರಪರಾಧಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಕ್ರೂರ ಆಕ್ರಮಣ ನಡೆಸುತ್ತಿರುವುದನ್ನು ಪ್ರತಿಭಟಿಸಿ ಕಾಸರಗೋಡಿನಲ್ಲಿ ಸಂಘ ಪರಿವಾರದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ವಿಶ್ವ ಹಿಂದೂ ಪರಿಷತ್ ಕಣ್ಣೂರು ವಿಭಾಗ ಸಂಘಟನಾ ಕಾರ್ಯದರ್ಶಿ ಸಂಕಪ್ಪ ಭಂಡಾರಿ, ನಗರ ಸಮಿತಿ ಗೌರವಾಧ್ಯಕ್ಷ ಕೆ.ಎನ್. ವೆಂಕಟ್ರಮಣ ಹೊಳ್ಳ, ಕಾರ್ಯಾಧ್ಯಕ್ಷ ಕಮಲೇಶ್, ಕಾರ್ಯದರ್ಶಿ ಗಣೇಶ್ ಬೀರಂತಬೈಲು, ಬಿಜೆಪಿ ಕಾಸರಗೋಡು ಮಂಡಲ ಅಧ್ಯಕ್ಷೆ ಪ್ರಮೀಳಾ ಮಜಲ್, ಪ್ರಧಾನ ಕಾರ್ಯದರ್ಶಿ ಸುಕುಮಾರ್ ಕುದ್ರೆಪ್ಪಾಡಿ, ಗುರುಪ್ರಸಾದ್ ಪ್ರಭು, ಬಿಎಂಎಸ್ ಮುಖಂಡ ದಿನೇಶ್, ಆರ್‌ಎಸ್‌ಎಸ್ ಪ್ರಮುಖ್ ಸುನಿಲ್ ಅಣಂಗೂರು ನೇತೃತ್ವ ವಹಿಸಿದರು. ವಿಎಚ್‌ಪಿ ಜೊತೆ ಕಾರ್ಯದರ್ಶಿ ಕಿಶೋರ್ ಕುಮಾರ್ ಸ್ವಾಗತಿಸಿ, ಉಪಾಧ್ಯಕ್ಷ ಕೆ.ಎನ್. ರಾಮಕೃಷ್ಣ ಹೊಳ್ಳ ವಂದಿಸಿದರು.

Leave a Reply

Your email address will not be published. Required fields are marked *

You cannot copy content of this page