ಬಿಜೆಪಿ ಬದಿಯಡ್ಕ ಮಂಡಲ ಸಮಿತಿಯಿಂದ ತುರ್ತು ಪರಿಸ್ಥಿತಿ ವಿರುದ್ಧ ಹೋರಾಟಗಾರರಿಗೆ ಅಭಿನಂದನೆ
ಬದಿಯಡ್ಕ: ಬಿಜೆಪಿ ಬದಿಯಡ್ಕ ಮಂಡಲ ಸಮಿತಿ ನೇತೃತ್ವದಲ್ಲಿ ತುರ್ತು ಪರಿಸ್ಥಿತಿಯ ಸಮಯದಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ಮಾಡಿ ಜೈಲು ವಾಸ ಅನುಭವಿಸಿದ ಹಿರಿಯ ಕಾರ್ಯಕರ್ತ ಕೈಲಂಕಜೆ ಗಣಪತಿ ಭಟ್, ಹಿರಿಯ ಮುಖಂಡ, ರಾಷ್ಟ್ರೀಯ ಸಮಿತಿ ಸದಸ್ಯ ಎಂ. ಸಂಜೀವ ಶೆಟ್ಟಿ ಮೊಟ್ಟೆಕುಂಜ ದಂಪತಿಯನ್ನು ಗೌರವಿಸಲಾಯಿತು. ಕೈಲಂಕಜೆ ಗಣಪತಿ ಭಟ್ರನ್ನು ಎಂ. ಸಂಜೀವ ಶೆಟ್ಟಿ ಮೊಟ್ಟೆಕುಂಜ ಇವರ ನೇತೃತ್ವದಲ್ಲಿ ಗೌರವಿಸಿದರೆ, ಮೊಟ್ಟೆಕುಂಜ ದಂಪತಿಯನ್ನು ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಅಭಿನಂದಿಸಿದರು. ಈ ವೇಳೆ ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಮುಂಡೋಳುಮೂಲೆ, ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಮಂಡಲ ಕೋಶಾಧಿಕಾರಿ ನಾರಾಯಣ ಭಟ್, ಏರಿಯಾ ಅಧ್ಯಕ್ಷ ವಿಶ್ವನಾಥ ಪ್ರಭು, ಪ್ರಧಾನ ಕಾರ್ಯದರ್ಶಿ ಆನಂದ ಕೆ, ಜಿಲ್ಲಾ ಮುಖಂಡರಾದ ಸುಧಾಮ ಗೋಸಾಡ, ಹರೀಶ್ ನಾರಂಪಾಡಿ, ಕುಂಬ್ಡಾಜೆ ಪಂ. ಸಮಿತಿ ಅಧ್ಯಕ್ಷ ಶಶಿಧರ ತೆಕ್ಕೇಮೂಲೆ, ಪ್ರಧಾನ ಕಾರ್ಯದರ್ಶಿ ಪ್ರಮೋದ್ ಭಂಡಾರಿ, ಬೂತ್ ಅಧ್ಯಕ್ಷ ದಯಾನಂದ ಉಪಸ್ಥಿತರಿದ್ದರು.