ಬೀದಿನಾಯಿಗಳಿಗೆ ಚುಚ್ಚುಮದ್ದು ನೀಡಿಕೆ
ಕಾಸರಗೋಡು: ನಾಡಿನಾದ್ಯಂತ ಬೀದಿನಾಯಿಗಳ ಹಾವಳಿ ತೀವ್ರಗೊಂಡ ಹಿನ್ನೆಲೆಯಲ್ಲಿ ಅವುಗಳನ್ನು ಹಿಡಿದು ಚುಚ್ಚುಮದ್ದು ನೀಡುವ ಪ್ರಕ್ರಿಯೆ ವಿವಿಧೆಡೆ ನಡೆಯುತ್ತಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಸಹಕಾರದೊಂದಿಗೆ ಪಶುಸಂಗೋಪನಾ ಇಲಾಖೆ ಈ ಕ್ರಮ ಕೈಗೊಂಡಿದೆ. ಇದರಂತೆ ಮಧೂರು ಪಂಚಾಯತ್ ವ್ಯಾಪ್ತಿಯ ಕೂಡ್ಲು ಗಂಗೆ ರಸ್ತೆಯಲ್ಲಿ ಅಲೆದಾಡುತ್ತಿದ್ದ ಬೀದಿನಾಯಿಗಳನ್ನು ಹಿಡಿದು ಚುಚ್ಚುಮದ್ದು ನೀಡಲಾಯಿತು.