ಬೈಕ್ ಅಪಘಾತ: ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಯುವಕ ಮೃತ್ಯು

ಮಾನ್ಯ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮಾನ್ಯ ನಿವಾಸಿ ರಾಮಪ್ಪ ಎಂಬವರ ಪುತ್ರ ಚರಣ್ (೨೦) ಮೃತಪಟ್ಟ ದುರ್ದೈವಿ. ಇವರು ಮಂಗಳೂರು ಬೈಕಂಪಾಡಿಯ ಖಾಸಗಿ ಸಂಸ್ಥೆಯೊಂದರಲ್ಲಿ ನೌಕರನಾಗಿದ್ದರು. ಈ ತಿಂಗಳ ೧೭ರಂದು ಇವರು ಸಂಚರಿಸುತ್ತಿದ್ದ ಬೈಕ್ ಪಾಣೆಮಂಗಳೂರಿನಲ್ಲಿ ಅಪ ಘಾತಕ್ಕೀಡಾಗಿತ್ತು. ನಿಯಂತ್ರಣ ತಪ್ಪಿದ ಬೈಕಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಅಪಘಾತವುಂಟಾ ಗಿರುವುದಾಗಿ ಹೇಳಲಾಗುತ್ತಿದೆ. ಇದರಲ್ಲಿ ಗಂಭೀರ ಗಾಯಗೊಂಡಿದ್ದ ಚರಣ್‌ರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮಧ್ಯಾಹ್ನ ವೇಳೆ ನಿಧನ ಸಂಭವಿಸಿದೆ. ಮೃತದೇಹವನ್ನು ನಿನ್ನೆ ಸಂಜೆ ವೇಳೆ ಮನೆಗೆ ತಲುಪಿಸಿ ಅಂತ್ಯ ಸಂಸ್ಕಾರ ನಡೆಸಲಾಯಿತು. ಮೃತರು ತಂದೆ, ತಾಯಿ ಪ್ರೇಮ, ಸಹೋದರಿ ಚೈತ್ರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ನಿಧನಕ್ಕೆ ಸಾಮ್ರಾಟ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಮಾನ್ಯ ಸಂತಾಪ ಸೂಚಿಸಿದೆ.

Leave a Reply

Your email address will not be published. Required fields are marked *

You cannot copy content of this page