ಬೈಕ್-ಸ್ಕೂಟರ್ ಢಿಕ್ಕಿ ಹೊಡೆದು ಯುವಕನಿಗೆ ಗಂಭೀರ ಗಾಯ

ಕುಂಬಳೆ-ಸೀತಾಂಗೋಳಿ ಮಧ್ಯೆ ಪುನರಾವರ್ತಿಸುತ್ತಿರುವವಾಹನ ಅಪಘಾತಗಳು

ಕುಂಬಳೆ: ನಾಯ್ಕಾಪಿನಲ್ಲಿ ಸ್ಕೂಟರ್ ಹಾಗೂ ಬೈಕ್ ಢಿಕ್ಕಿ ಹೊಡೆದು ಯುವಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೊಡ್ಯಮ್ಮೆ ಮುಂಡಪ್ಪಳ್ಳದ ರಾಕೇಶ್ (22) ಎಂಬವರು ಗಾಯಗೊಂ ಡಿದ್ದು, ಇವರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೊನ್ನೆ ರಾತ್ರಿ 9 ಗಂಟೆ ವೇಳೆ ಅಪಘಾತ ಸಂಭವಿಸಿದೆ. ರಾಕೇಶ್ ಸಂಚರಿಸುತ್ತಿದ್ದ ಬೈಕ್ ಹಾಗೂ ಎದುರು ಭಾಗದಿಂದ ಬರುತ್ತಿದ್ದ ಸ್ಕೂಟರ್ ಪರಸ್ಪರ ಢಿಕ್ಕಿ ಹೊಡೆದು ಅಪಘಾತವುಂಟಾಗಿದೆ. ಸ್ಕೂಟರ್ ಸವಾರ ಸಣ್ಣಪುಟ್ಟ ಗಾಯಗೊಂಡಿದ್ದಾನೆ.

ಇದೇ ವೇಳೆ ಕುಂಬಳೆ -ಸೀತಾಂಗೋಳಿ ಮಧ್ಯೆ ವಾಹನ ಅಪಘಾತಗಳು ಪದೇ ಪದೇ ಸಂಭವಿಸುತ್ತಿರುವುದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಈ ರಸ್ತೆಯನ್ನು ಅಗಲ ಹೆಚ್ಚಿಸಿ ಅಭಿವೃದ್ಧಿ ಗೊಳಿಸಿದ ಬಳಿಕ ಒಂದು ವರ್ಷದೊಳಗೆ ಹಲವು ಅಪಘಾತಗಳು ಸಂಭವಿಸಿದೆ. ಕಳೆದ ಒಂದು ತಿಂಗಳಲ್ಲಿ ಮಾತ್ರ ೨೦ರಷ್ಟು ಅಪಘಾತಗಳು ಉಂಟಾಗಿದೆ.

Leave a Reply

Your email address will not be published. Required fields are marked *

You cannot copy content of this page