ಭಯೋತ್ಪಾದಕ ದಾಳಿಯಲ್ಲಿ 20 ಸಾವಿರ ಭಾರತೀಯರು ಬಲಿ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ವಿರುದ್ದ ಭಾರತ ವಾಗ್ದಾಳಿ
ದೆಹಲಿ: ಕಳೆದ ನಾಲ್ಕು ದಶಕಗಳಲ್ಲಿ ಪಾಕಿಸ್ತಾನದ ಪ್ರಾಯೋಜಕತ್ವದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 20 ಸಾವಿರಕ್ಕೂ ಹೆಚ್ಚು ಭಾರತೀಯರು ಸಾವನ್ನಪ್ಪಿದ್ದಾರೆಂದು ವಿಶ್ವಸಂಸ್ಥೆಯಲ್ಲಿ ಭಾರತ ಪಾಕಿಸ್ತಾನದ ವಿರುದ್ದ ವಾಗ್ದಾಳಿ ನಡೆಸಿದೆ. ವಿಶ್ವಸಂಸ್ಥೆಯಲ್ಲಿ ಭಾರತ ಖಾಯಂ ಪ್ರತಿನಿಧಿ, ರಾಯಭಾರಿ ಪರ್ವತನೇನಿ ಹರೀಶ್ ಅವರು ಈ ವಿಷಯವನ್ನು ವಿಶ್ವಸಂಸ್ಥೆಯ ಗಮನಕ್ಕೆ ತಂದಿದ್ದಾರೆ.
ಭಾರತದಲ್ಲಿ ಪಾಕಿಸ್ತಾನ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯು ನಾಗರಿಕರ ಜೀವನ, ಧಾರ್ಮಿಕ ಸಾಮರಸ್ಯ ಮತ್ತು ಆರ್ಥಿಕ ಸಮೃದ್ಧಿಯನ್ನು ಒತ್ತೆಯಾಳು ಗಳಾಗಿ ಇರಿಸಲು ಪ್ರಯತ್ನಿಸುತ್ತಿದೆ ಎಂದೂ ಅವರು ಹೇಳಿದರು.