ಭಾರತೀಯ ಅಭಿಭಾಷಕ ಪರಿಷತ್ ಸದಸ್ಯತನ ಕಾರ್ಯಾಗಾರಕ್ಕೆ ಚಾಲನೆ

ಕಾಸರಗೋಡು: ಭಾರತೀಯ ಅಭಿಭಾಷಕ ಪರಿಷತ್ ಜಿಲ್ಲಾ ಸಮಿತಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಸದಸ್ಯತನ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು. ಕಾಸರಗೋಡು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಭಾರತೀಯ ಅಭಿಭಾಷಕ ಪರಿಷತ್ ರಾಜ್ಯ ಕಾರ್ಯದರ್ಶಿ ನ್ಯಾ| ಪಿ.ಪಿ. ಸಂದೀಪ್ ಕುಮಾರ್ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ನ್ಯಾ| ಎ.ಸಿ. ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದರು. ರಾಜ್ಯ ಉಪಾಧ್ಯಕ್ಷ ನ್ಯಾ| ಬಿ. ರವೀಂದ್ರನ್, ಕೆ. ಕರುಣಾಕರನ್ ನಂಬ್ಯಾರ್, ಕೆ.ಜಿ. ಅನಿಲ್, ಎಂ. ಕುಸುಮ, ಸಚಿನ್ ಶೆಣೈ, ಕೆ.ಎಂ. ಬೀನಾ, ಭಾರತ್ ವೆಂಕಟೇಶ್ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನ್ಯಾ| ಕೆ.ಜೆ. ನವೀನ್‌ರಾಜ್ ಸ್ವಾಗತಿಸಿದರು.

Leave a Reply

Your email address will not be published. Required fields are marked *

You cannot copy content of this page