ಮಂಗಲ್ಪಾಡಿ ಪಂಚಾಯತ್‌ನಲ್ಲಿ ಅವ್ಯವಹಾರ: ಬಿಜೆಪಿ ಧರಣಿ ಸತ್ಯಾಗ್ರಹ ನಾಳೆ

ಉಪ್ಪಳ: ಮಂಗಲ್ಪಾಡಿ ಪಂಚಾಯತ್‌ನಲ್ಲಿ ನಡೆಯುವ ಅವ್ಯವಹಾರದ ವಿರುದ್ಧ ಭಾರತೀಯ ಜನತಾ ಪಕ್ಷ ಮಂಗಲ್ಪಾಡಿ ಪಂಚಾಯತ್ ಸಮಿತಿ ಆಶ್ರಯದಲ್ಲಿ ನಾಳೆ ಬೆಳಿಗ್ಗೆ ೧೦ ಗಂಟೆಗೆ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ಧರಣಿ ಸತ್ಯಾಗ್ರಹ ನಡೆಯಲಿದೆ. ಪರಿಶಿಷ್ಟ ಜಾತಿ ವಿಭಾಗದವರಿಗೆ ಶಿಕ್ಷಣದಂಗವಾಗಿ ಪಂಚಾಯತ್‌ನಿಂದ ಕೊಡಲ್ಪಟ್ಟ ಕಂಪ್ಯೂಟರ್, ಲ್ಯಾಪ್‌ಟಾಪನ್ನು ಅರ್ಹರಿಗೆ ನೀಡದೆ ಅವರ ನಕಲಿ ಸಹಿಯೊಂದಿಗೆ ಖರೀದಿಸಿ ಮೋಸಗೊಳಿಸಿದ ಅವ್ಯವಹಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ. ಬಿಜೆಪಿಯ ನೇತಾರರು, ಕಾರ್ಯ ಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಲು ಸಂಬಂಧಪಟ್ಟವರು ವಿನಂತಿಸಿದ್ದಾರೆ.

RELATED NEWS

You cannot copy contents of this page