ಮಂಜೇಶ್ವರದಲ್ಲಿ ಚುನಾವಣಾ ತಕರಾರು ಪ್ರಕರಣ : ದೋಷಮುಕ್ತಗೊಳಿಸಿ ನೀಡಿದ ತೀರ್ಪಿಗೆ ಹೈಕೋರ್ಟ್ ತಡೆಯಾಜ್ಞೆ

ಕೊಚ್ಚಿ: ಮಂಜೇಶ್ವರ ಚುನಾವಣಾ ತಕರಾರು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಹೆಸರಿಸಲಾಗಿರುವ ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ ಸೇರಿದಂತೆ ಒಟ್ಟು ಆರು ಮಂದಿಯನ್ನು ದೋಷಮುಕ್ತಗೊಳಿಸಿ ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯ ನೀಡಿದ ತೀರ್ಪಿಗೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಸುರೇಂದ್ರನ್ ಸೇರಿದಂತೆ ಇತರ  ಆರು ಮಂದಿಯನ್ನು ಜಿಲ್ಲಾ ಸೆಶನ್ಸ್ ನ್ಯಾಯಾಲಯ ದೋಷಮುಕ್ತ ಗೊಳಿಸಿ ನೀಡಿದ ತೀರ್ಪಿನ ವಿರುದ್ಧ ರಾಜ್ಯ ಸರಕಾರ ಹೈಕೋರ್ಟ್‌ಗೆ  ರಿವಿಶನ್ ಪಿಟಿಶನ್ ಸಲ್ಲಿಸಿತ್ತು. ಮಾತ್ರವಲ್ಲ ಜಿಲ್ಲಾ ಸೆಶನ್ಸ್  ನ್ಯಾಯಾಲಯ  ನೀಡಿದ ತೀರ್ಪನ್ನು ರದ್ದು ಪಡಿಸಬೇಕೆಂದೂ ಅರ್ಜಿಯಲ್ಲಿ ಸರಕಾರ ಆಗ್ರಹಪಟ್ಟಿದೆ. ಅದನ್ನು ಪರಿಶೀಲಿಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ. ಬಾಬು ಅವರು ಈ ತೀರ್ಪಿಗೆ ತಡೆಯಾಜ್ಞೆ ಹೊರಡಿಸಿದ್ದಾರೆ. ಈ ಅರ್ಜಿಯ ಕುರಿತಾದ ಮುಂದಿನ ಪರಿಶೀಲನೆಯನ್ನು ಹೈಕೋರ್ಟ್ ನ.೮ಕ್ಕೆ ಮುಂದೂಡಿದೆ.

೨೦೨೧ರಂದು ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ. ಸುಂದರರಿಗೆ ೨.೫ ಲಕ್ಷ ರೂ. ಹಾಗೂ ಮೊಬೈಲ್ ಫೋನ್ ನೀಡಿ ಅವರ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಮಾಡಲಾಗಿದೆ ಎಂದು ಆರೋಪಿಸಿ ಇದೇ ಕ್ಷೇತ್ರದಲ್ಲಿ ಅಂದು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ. ಸುರೇಂದ್ರನ್ ಸೇರಿದಂತೆ ಆರು ಮಂದಿ ವಿರುದ್ಧ ಎಡರಂಗದ ಅಭ್ಯರ್ಥಿ ವಿ.ವಿ. ರಮೇಶನ್ ಪೊಲೀಸರಿ ದೂರು ನೀಡಿದ್ದರು. ಅದರಂತೆ ಪೊಲೀಸರು ಕೇಸು ದಾಖಲಿಸಿದ್ದು, ನಂತರ ಪ್ರಕರಣದ ತನಿಖೆಯನ್ನು ಕ್ರೈಮ್ ಬ್ರಾಂಚ್ ವಹಿಸಿಕೊಡಲಾಗಿತ್ತು. ಅದರಂತೆ ಕ್ರೈಮ್ ಬ್ರಾಂಚ್ ಆ ಬಗ್ಗೆ ತನಿಖೆ ನಡೆಸಿದ ಜಿಲ್ಲಾ ಸೆಶನ್ಸ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿತ್ತು. ಆದರೆ ತಮ್ಮ ವಿರುದ್ಧ ದಾಖಲಿಸಲಾಗಿರುವ ಪ್ರಕರಣ ವಾಸ್ತ ರಹಿತವಾದುದೆಂದೂ, ಆದ್ದರಿಂದ ಅದು ಕಾನೂನು ಪ್ರಕಾರ ನೆಲೆಗೊಳ್ಳದು. ಆದು ದರಿಂದ ತಮ್ಮ ವಿರುದ್ದ ದಾಖಲಿಸಲಾ ಗಿದ್ದ ಪ್ರಕರಣವನ್ನು ರದ್ದುಪಡಿಸಬೇಕೆಂದು ಕೋರಿ ಸುರೇಂದ್ರನ್ ಸೇರಿದಂತೆ  ಆರು ಮಂದಿ ಜಿಲ್ಲಾ ಸೆಶನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಸುರೇಂದ್ರನ್ ಸಹಿತ ಆರು ಮಂದಿಯನ್ನು ದೋಷಮುಕ್ತಗೊಳಿಸಿ ಅಕ್ಟೋಬರ್ ೫ರಂದು ತೀರ್ಪು ನೀಡಿತ್ತು. ಅದರ ವಿರುದ್ಧ ಸರಕಾರ ಹೈಕೋರ್ಟ್‌ಗೆ ರಿವಿಶನ್ ಪಿಟಿಶನ್ ಸಲ್ಲಿಸಿದೆ.

You cannot copy contents of this page