ಮಂಜೇಶ್ವರದಲ್ಲಿ ಹೆಲ್ತ್ ಇನ್‌ಸ್ಪೆಕ್ಟರ್ ಕ್ವಾರ್ಟರ್ಸ್‌ನ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಉಪ್ಪಳ: ಮಂಜೇಶ್ವರದಲ್ಲಿ ಆರೋಗ್ಯ ಅಧಿಕಾರಿಯೊಬ್ಬರು ವಾಸಸ್ಥಳದ ಶೌಚಾಲಯದಲ್ಲಿ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಂಜೇಶ್ವರ ಬ್ಲೋಕ್ ಪಂಚಾಯತ್ ಕುಟುಂಬ ಆರೋಗ್ಯ ಕೇಂದ್ರದ ಹೆಲ್ತ್ ಇನ್‌ಸ್ಪೆಕ್ಟರ್ ಪತ್ತನಂತಿಟ್ಟ ನಿವಾಸಿ ಮನೋಜ್ ಕೆ.ವಿ (45) ಎಂಬವರು  ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಆಸ್ಪತ್ರೆಯ ಅಲ್ಪ ದೂರದಲ್ಲಿರುವ ಬಾಡಿಗೆ ಕ್ವಾರ್ಟ ರ್ಸ್‌ನಲ್ಲಿ ಇವರು ಏಕಾಂಗಿಯಾಗಿ  ವಾಸಿಸುತ್ತಿದ್ದರು. ನಿನ್ನೆ ಇವರು ಆಸ್ಪತ್ರೆಗೆ ತಲುಪಿರಲಿಲ್ಲ. ಇದರಿಂದ ಸಹೋದ್ಯೋಗಿಗಳು ಅವರಿಗೆ ಫೋನ್ ಕರೆ ಮಾಡಿದರೂ ಕರೆ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ನೌಕರರು  ವಾಸಸ್ಥಳಕ್ಕೆ ತೆರಳಿ ನೋಡಿದಾಗ ಕೊಠಡಿಗೆ ಒಳಗಿನಿಂದ ಚಿಲಕ ಹಾಕಲಾಗಿತ್ತು.  ಇದೇ ವೇಳೆ ಒಳಗಿನಿಂದ ದುರ್ನಾತ ಬೀರುತ್ತಿತ್ತು. ಇದರಿಂದ ಮಂಜೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಕೂಡಲೇ ತಲುಪಿದ ಪೊಲೀಸರು ಬಾಗಿಲು ತೆರೆದು ನೋಡಿದಾಗ ಶೌಚಾಲ ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಮನೋಜ್ ಪತ್ತೆಯಾಗಿದ್ದಾರೆ.

ಎರಡು ದಿನಗಳ ಹಿಂದೆ ಇವರು ಮೃತಪಟ್ಟಿರಬಹುದೆಂದು ಸಂಶಯಿ ಸಲಾಗಿದೆ. ಮೃತದೇಹವನ್ನು ಕಾಸರಗೋ ಡು ಜನರಲ್ ಆಸ್ಪತ್ರೆಗೆ ತಲುಪಿಸಲಾ ಗಿದೆ. ಸಾವಿಗೆ ಕಾರಣವೇನೆಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿಯಬಹುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ತಿಂಗಳ ಹಿಂದೆಯಷ್ಟೇ ಇವರು ಬದಿಯಡ್ಕದಿಂದ ಮಂಜೇಶ್ವರ ಕುಟುಂಬ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದರು.

ಕೆ.ವಿ. ವಿಶ್ವನಾಥನ್ ಎಂಬವರ ಪುತ್ರನಾದ ಮೃತರು ಪತ್ನಿ ಶೀಜ (ಕೋಟ್ಟಯಂ ಮೆಡಿಕಲ್ ಕಾಲೇಜು ಆಸ್ಪತ್ರೆಯ ಹೆಡ್‌ನರ್ಸ್), ಪುತ್ರ ನಂದು ಮನೋಜ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You cannot copy content of this page