ಮಂಜೇಶ್ವರ ಉಪಜಿಲ್ಲಾ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳಿಗೆ ಅಭಿವಂದನೆ
ಧರ್ಮತ್ತಡ್ಕ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವವು ನವೆಂಬರ್ 7 ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು ಈ ಕಲೋತ್ಸವದ ಯಶಸ್ವಿಗೆ ಸಹಕರಿಸಿದ ಸಂಘ ಸಂಸ್ಥೆಗಳನ್ನು ಗೌರವಿಸುವ ಕಾರ್ಯಕ್ರಮವು ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆಯಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕುಡಾಲು ಅಧ್ಯಕ್ಷತೆ ವಹಿಸಿದರು. ಶಾಲಾ ಪ್ರಾಂಶುಪಾಲ ರಾಮಚಂದ್ರ ಭಟ್ ಪ್ರಾಸ್ತಾವಿಕ ನುಡಿದರು. ವ್ಯವಸ್ಥಾಪಕ . ಶಂಕರನಾರಾಯಣ ಭಟ್, ಶಾಲಾ ಮಾತೃ ಮಂಡಳಿ ಅಧ್ಯಕ್ಷೆ ಪುಷ್ಪಾ ಕಮಲಾಕ್ಷ , ಪೈವಳಿಕೆ ಪಂಚಾಯತ್ ಸದಸ್ಯ ಅಶೋಕ್ ಭಂಡಾರಿ, ಶಾಲಾ ಮ್ಯಾನೇಜರ್ ವಿಜಯಶ್ರೀ ಬಿ ಮತ್ತು ಹಿರಿಯ ಅಧ್ಯಾಪಕ. ರಾಮ್ ಮೋಹನ್ ಸಿ.ಎಚ್. ಸಂಘ ಸಂಸ್ಥೆಗಳನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸತೀಶ್ಚಂದ್ರ ಭಂಡಾರಿ ಕೋಳಾರು, ಶಂಕರ ರಾವ್ ಕಕ್ವೆ , ಜಾನ್ ಡಿಸೋಜಾ , ಅಶ್ರಫ್ ಸೋಕೆ, ಗೋವಿಂದ ಭಟ್ ಕನಿಯಾಲ, ಕೃಷ್ಣ ಕಿಶೋರ್ ಮÁತನಾಡಿದರು. ಸಹಕರಿಸಿದ 45 ಸಂಘ ಸಂಸ್ಥೆಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘ ಸಂಸ್ಥೆಗಳ ಹೆಸರುಗಳನ್ನು ಉಣ್ಣಿಕೃಷ್ಣನ್ ಮತ್ತು ನಿವೇದಿತಾ ವಾಚಿಸಿದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಗೋವಿಂದ ಭಟ್ ಸ್ವಾಗತಿಸಿ , ಎಯುಪಿ ಶಾಲಾ ಮುಖ್ಯೋಪಾಧ್ಯಾಯ ಮಹಾಲಿಂಗ ಭಟ್ ವಂದಿಸಿದರು. ಅಧ್ಯಾಪಿಕೆಯರು ಪ್ರಾರ್ಥಿಸಿದರು. ಸತೀಶ್ ಕುಮಾರ್ ಶೆಟ್ಟಿ ನಿರೂಪಿಸಿದರು.