ಮದುವೆ ಭರವಸೆಯೊಡ್ಡಿ ಯುವತಿಗೆ ಲೈಂಗಿಕ ದೌರ್ಜನ್ಯ: ಪತ್ವಾಡಿ ನಿವಾಸಿ ವಿರುದ್ಧ ಕೇಸು

ಉಪ್ಪಳ: ಮದುವೆಯಾಗು ವುದುದಾಗಿ ಭರವಸೆಯೊಡ್ಡಿ 32ರ ಹರೆಯದ ಯುವತಿಯನ್ನು ವಿವಿಧೆಡೆಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯಗೈದಿರುವುದಾಗಿ ದೂರಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಯುವತಿ ನೀಡಿದ ದೂರಿನ ಮೇರೆಗೆ ಪತ್ವಾಡಿಯ ವಿನೋದ್ ಕುಮಾರ್ ಎಂಬಾತನ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಪ್ರಸ್ತುತ ಆರೋಪಿ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆಹಚ್ಚಲು ಪೊಲೀಸರು  ತನಿಖೆ ತೀವ್ರಗೊಳಿಸಿದ್ದಾರೆ. ಮೇ, ಜೂನ್ ತಿಂಗಳುಗಳಲ್ಲಿ  ಯುವತಿಗೆ ಆರೋಪಿ ಕಿರುಕುಳ ನೀಡಿರುವುದಾಗಿ ತಿಳಿಸಲಾಗಿದೆ. ಬಳಿಕ ಯುವಕ

ಮದುವೆ ಭರವಸೆಯಿಂದ  ಹಿಂಜರಿದಿ ರುವುದರಿಂದ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.

RELATED NEWS

You cannot copy contents of this page