ಮಾನ್ಯ-ಚರ್ಲಡ್ಕ ರಸ್ತೆ ಸ್ಥಿತಿ ಶೋಚನೀಯ: ವಾಹನ ಸಂಚಾರಕ್ಕೆ ಸಮಸ್ಯೆ ಕಾಂಗ್ರೆಸ್‌ನಿಂದ ಹೋರಾಟ ಮುನ್ನೆಚ್ಚರಿಕೆ

ಮಾನ್ಯ: ಬದಿಯಡ್ಕ ಪಂಚಾ ಯತ್ ವ್ಯಾಪ್ತಿಯ ಮಾನ್ಯ ವಿಜಯ ನಗರದಿಂದ ಚರ್ಲಡ್ಕಕ್ಕೆ ಸಂಪರ್ಕಿ ಸುವ ರಸ್ತೆಯ ಸ್ಥಿತಿ ಶೋಚನೀ  ಯವಾಗಿದ್ದು, ಇದರಿಂದ ವಾಹನ ಸಂ ಚಾರಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ.

ಈ ರಸ್ತೆಯ ಅಭಿವೃದ್ಧಿಗಾಗಿ ಸರಕಾರದಿಂದ ೨ ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಇದರಂತೆ ಜೂನ್ ತಿಂಗಳಲ್ಲಿ ಕಾಮ ಗಾರಿ ಆರಂಭಿಸಲಾಗಿತ್ತು. ಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಾಮಗಾರಿ ಸ್ಥಗಿತಗೊಂಡಿದೆಯೆಂದು ಕಾಂಗ್ರೆಸ್ ಬದಿಯಡ್ಕ ಮಂಡಲ ಸಮಿತಿ ಆರೋಪಿಸಿದೆ.

ಪ್ರತಿದಿನ ನೂರಾರು ವಾಹನಗಳು ಸಂಚರಿಸುವ ಈ ರಸ್ತೆಯ ಸ್ಥಿತಿ ಶೋಚನೀಯಾವಸ್ಥೆಯಲ್ಲಿರುವುದು ನಾಗರಿಕರಿಗೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದೆ. ರಸ್ತೆಯ ಕಾಮಗಾರಿ ಶೀಘ್ರ ಆರಂಭಿಸದಿದ್ದಲ್ಲಿ ಪಿಡಬ್ಲ್ಯುಡಿ ಕಚೇರಿ ಮುಂದೆ ಸತ್ಯಾಗ್ರಹ ನಡೆಸುವುದಾಗಿ ಕಾಂಗ್ರೆಸ್ ಬದಿಯಡ್ಕ ಮಂಡಲ ಅಧ್ಯಕ್ಷ ಶ್ಯಾಮ್ ಪ್ರಸಾದ್ ಮಾನ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page