ಯುವಕ ಮನೆಯೊಳಗೆ ನೇಣುಬಿಗಿದು ಸಾವು
ಉಪ್ಪಳ: ಯುವಕನೋರ್ವ ಮನೆಯೊಳಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಮೀಂಜ ಪಂಚಾಯತ್ ವ್ಯಾಪ್ತಿ ಯ ದಡ್ಡಂಗಡಿ ನಿವಾಸಿ ಗುಮ್ಮಣ್ಣ ಶೆಟ್ಟಿಗಾರ್ ಎಂಬವರ ಪುತ್ರ ಚರಣ್ ರಾಜ್ ಜಿ (35) ಮೃತಪಟ್ಟ ಯುವಕ.
ಇವರು ನಿನ್ನೆ ರಾತ್ರಿ ಮನೆಯಲ್ಲಿ ಊಟಮಾಡಿ ನಿದ್ರಿಸಿದ್ದರು. ಇಂದು ಬೆಳಿಗ್ಗೆ 6.30ಕ್ಕೆ ಎಬ್ಬಿಸಲೆಂದು ತಾಯಿ ಹೋದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಿತ್ತು. ಕರೆದರೂ ಪ್ರತಿಕ್ರಿಯೆ ಉಂಟಾಗದ ಹಿನ್ನೆಲೆಯಲ್ಲಿ ಕಿಟಿಕಿ ಮೂಲಕ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಚರಣ್ರಾಜ್ ಪತ್ತೆಯಾಗಿ ದ್ದಾರೆ. ಈ ಬಗ್ಗೆ ಮಾಹಿತಿ ಲಭಿಸಿದ ಸ್ಥಳೀಯರು ತಲುಪಿ ಕೂಡಲೇ ಮಂಗ ಲ್ಪಾಡಿ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾ ಗಲಿಲ್ಲ. ಚರಣ್ರಾಜ್ ಇಲೆ ಕ್ಟ್ರೀಶ್ಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ನೇಣು ಬಿಗಿದು ಸಾವಿಗೆ ಶರಣಾಗಲು ಕಾರಣವೇನೆಂದು ತಿಳಿದುಬಂದಿಲ್ಲ. ಘಟನೆ ಬಗ್ಗೆ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ.
ಮೃತರು ತಂದೆ, ತಾಯಿ ಭಾಗೀರಥಿ, ಸಹೋದರಿಯರಾದ ಜಯಶ್ರೀ, ಶ್ರೀವಾಣಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.