ಯುವಕ ಮನೆಯೊಳಗೆ ನೇಣು ಬಿಗಿದು ಸಾವು

ಮುಳ್ಳೇರಿಯ: ಯುವಕನೋ ರ್ವ ಮನೆಯೊಳಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾನೆ. ನೆಟ್ಟಣಿಗೆ ಬಳಿಯ ಪಾದೆಗದ್ದೆ ನಿವಾಸಿ ರಾಮ ನಾಯ್ಕ ಎಂಬವರ ಪುತ್ರ ಬಾಲಕೃಷ್ಣ (೪೪) ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ ೪ ಗಂಟೆ ವೇಳೆ ಬಾಲಕೃಷ್ಣ ಮನೆಯೊಳಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆನ್ನಲಾಗಿದೆ. ಅವಿವಾಹಿತನಾದ ಇವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕನಾಗಿದ್ದರು. ಮೃತದೇಹದ ಮರಣೋತ್ತರ ಪರೀಕ್ಷೆ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ನಡೆಸಲಾಯಿತು.

ಮೃತರು ತಂದೆ, ತಾಯಿ ಸರೋಜಿನಿ, ಸಹೋದರ- ಸಹೋದರಿಯರಾದ ಜನಾರ್ದನ, ಜಯಂತಿ, ಪ್ರೇಮ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You cannot copy content of this page