ಯುವತಿ ನಾಪತ್ತೆ

ಕುಂಬಳೆ: ಕೆಲಸಕ್ಕೆಂದು ತಿಳಿಸಿ ಹೋದ ಯುವತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಬಂದ್ಯೋಡು ಬಳಿಯ ಮಳ್ಳಂಗೈಯ ಜಯಕರ ಶೆಟ್ಟಿ ಎಂಬವರ ಪುತ್ರಿ ಶ್ರೇಯ (೨೩) ನಾಪತ್ತೆಯಾಗಿದ್ದಾಳೆನ್ನಲಾಗಿದೆ. ಈ ಬಗ್ಗೆ ತಂದೆ ನೀಡಿದ ದೂರಿನಂತೆ  ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಶ್ರೇಯ ಉಪ್ಪಳದ ಅಂಗಡಿಯೊಂ ದರಲ್ಲಿ ನೌಕರೆಯಾಗಿದ್ದಾಳೆ. ನಿನ್ನೆ ಬೆಳಿಗ್ಗೆ ಕೆಲಸಕ್ಕೆಂದು ತಿಳಿಸಿ ಹೋದಾಕೆ ಮರಳಿ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ.

You cannot copy contents of this page