ರಸ್ತೆ ದಾಟುತ್ತಿದ್ದ ವ್ಯಕ್ತಿ ಕಾರು ಢಿಕ್ಕಿ ಹೊಡೆದು ಮೃತ್ಯು

ಉಪ್ಪಳ: ರಸ್ತೆ ದಾಟುತ್ತಿದ್ದ ವ್ಯಕ್ತಿ ಕಾರು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ಬಂಗ್ರಮಂಜೇಶ್ವರ ವಾಮಂಜೂರು ಕಜೆ ನಿವಾಸಿ ದಿ| ಮೂಸಕುಂಞಿ ಎಂಬವರ ಪುತ್ರ ಮೊಹಮ್ಮದ್ ಸಾದಿಕ್ (40) ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ 10.30ಕ್ಕೆ ಪೊಸೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವುಂಟಾಗಿದೆ. ಮೊಹಮ್ಮದ್ ಸಾದಿಕ್ ರಸ್ತೆ ದಾಟುತ್ತಿದ್ದಾಗ ಮಂಜೇಶ್ವರ ಭಾಗದಿಂದ ಹೊಸಂಗಡಿಯತ್ತ ಸಂಚರಿಸುತ್ತಿದ್ದ ಇನೋವ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಮೊಹಮ್ಮದ್ ಸಾದಿಕ್‌ರನ್ನು ಮಂಗಳೂರಿನ ಆಸ್ರತ್ರೆಗೆ ಸಾಗಿಸುತ್ತಿದ್ದಂತೆ ದಾರಿ ಮಧ್ಯೆ ಸಾವು ಸಂಭವಿಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ. ಅಪಘಾತ ಬಗ್ಗೆ ಮಂಜೇಶರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.ಮೃತರು ತಾಯಿ ಮರಿಯಮ್ಮ, ಸಹೋದರ-ಸಹೋದರಿಯರಾದ ಅಬ್ದುಲ್ಲ, ಖಾದರ್, ತಾಹಿರ, ಅವ್ವಂಞಿ, ಖದೀಜ, ಹಾಜಿರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

You cannot copy contents of this page