ರಾಜ್ಯದಲ್ಲಿ ಇಂದು ಧಾರಾಕಾರ ಮಳೆ ಸಾಧ್ಯತೆ: ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಕಾಸರಗೋಡು: ರಾಜ್ಯದಲ್ಲಿ ಇಂದು ಧಾರಾಕಾರ ಮಳೆ ಸುರಿಯಲಿದೆಯೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕಲ್ಲಿಕೋಟೆ, ವಯನಾಡ್, ಮಲಪುರಂ, ಪಾಲಕ್ಕಾಡ್, ತೃಶೂರು, ಎರ್ನಾಕುಳಂ, ಆಲಪ್ಪುಳ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯೊಂದಿಗೆ ಭಾರೀ ಗಾಳಿಯೂ ಬೀಸಲಿದೆಯೆಂದು ತಿಳಿಸಲಾಗಿದೆ. ಸಮುದ್ರದಲ್ಲಿ ಬಲವಾದ ಅಲೆ ಬೀಸಲು ಸಾಧ್ಯತೆ ಇದೆಯೆನ್ನಲಾಗಿದೆ.

Leave a Reply

Your email address will not be published. Required fields are marked *

You cannot copy content of this page