ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿಜಯಿ: ಕುಂಬಳೆಯಲ್ಲೂ ಹರ್ಷಾಚರಣೆ

ಕುಂಬಳೆ : ಪಂಚರಾಜ್ಯ ಚುನಾವಣೆಯಲ್ಲಿ 3 ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾದಿsಸಿದ ಪ್ರಯುಕ್ತ ಕುಂಬಳೆ ನಗರದಲ್ಲಿ ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿಯ ಆಶ್ರಯದಲ್ಲಿ ಸುಡು ಮದ್ದು ಸಿಡಿಸುವ ಮೂಲಕ ವಿಜಯೋತ್ಸವ ವನ್ನು ಆಚರಿಸಲಾಯಿತು. ಬಿಜೆಪಿ ಕುಂಬಳೆ ಅಧ್ಯಕ್ಷ ಸುಜಿತ್ ರೈ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಸಮಿತಿ ಸದಸ್ಯ ಮುರಳಿಧರ ಯಾದವ ಉದ್ಘಾಟಿಸಿದರು. ಮುಂದೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಸ್ಪಷ್ಟ ಬಹುಮತದೊಂದಿದೆ 3 ನೇ ಬಾರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ಆಗುವುದು ಖಚಿತ ಎಂದು @È್ಣÁ್ಣ್ನ ಹೇಳಿದರು. ಬಿಜೆಪಿ ಮಂಡಲ ಉಪಾಧ್ಯಕ್ಷ ಕೆ. ರಮೇಶ ಭಟ್, ಕಾರ್ಯದರ್ಶಿ ಕೆ. ಸುಧಾಕರ್ ಕಾಮತ್À, ಯುವಮೋರ್ಚಾ ಕುಂಬಳೆ ಮಂಡಲ ಅಧ್ಯಕ್ಷ ಅವಿನಾಶ ಕಾರಂತ, ಜನಪ್ರತಿನಿದಿಗಳಾದ ಮೋಹನ ಕೆ, ಅಜಯ ಎಂ, ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿ ಉಪಾಧ್ಯಕ್ಷÀ ಜಗದೀಶ ಪೇರಾಲ, ಹಿರಿಯರಾದ ಬಾಬು ಗಟ್ಟಿ, ಮಧುಸೂದನ್, ವೇಣು ಕಡಪ್ಪುರ, ಕಾರ್ಯಕರ್ತರಾದ ಕೆ. ಮಧುಸೂದನ್ ಕಾಮತ್, ಅಭಿಲಾಷ್, ವರುಣ ಕುಮಾರ್, ಜಗದೀಶ್ ಕೋಟೆಕಾರ್, ಗಣೇಶ್ ಆಚಾರ್ಯ ಉಪಸ್ಥಿತರಿದ್ದರು. ಬಿಜೆಪಿ ಕುಂಬಳೆ ಪಂಚಾಯತ್ ಪ್ರಧಾನ ಕಾರ್ಯದರ್ಶಿ ಜಿತೇಶ್ ನಾಯ್ಕಾಪು ಸ್ವಾಗತಿಸಿ, ಯುವಮೋರ್ಚಾ ಕುಂಬಳೆ ಪಂಚಾಯತ್À ಸಮಿತಿ ಅಧ್ಯಕ್ಷ ಅಜಿತ್ ಕುಮಾರ ವಂದಿಸಿದರು.

Leave a Reply

Your email address will not be published. Required fields are marked *

You cannot copy content of this page