ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ವಾರ್ಷಿಕ ಸಮಾವೇಶ
ಕಾಸರಗೋಡು: ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ವಾರ್ಷಿಕ ಸಮಾವೇಶ ಪೇಟೆ ಶ್ರೀ ವೆಂಕಟ್ರಮಣ ಕ್ಷೇತ್ರದಲ್ಲಿ ಪ್ರಖಂಡ ಅಧ್ಯಕ್ಷ ಗುರುಪ್ರಸಾದ್ ಕೋಟೆಕಣಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿ.ಹಿಂ.ಪ ಕಣ್ಣೂರು ವಿಭಾಗ ಕಾರ್ಯದರ್ಶಿ ಚಂದ್ರಶೇಖರನ್ ಉದ್ಘಾಟಿಸಿ ಮಾತನಾಡಿದರು. ವಿ.ಹಿಂ.ಪ ಕಾಸರಗೋಡು ಪ್ರಖಂಡ ಗೌರವಾಧ್ಯಕ್ಷ ಕೆ.ಎನ್. ವೆಂಕಟ್ರಮಣ ಹೊಳ್ಳ, ಜಿಲ್ಲಾ ಕಾರ್ಯದರ್ಶಿ ಗಣೇಶ್ ಮಾವಿನಕಟ್ಟೆ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಂಕಪ್ಪ ಭಂಡಾರಿ, ಪ್ರಖಂಡ ಉಪಾಧ್ಯಕ್ಷ ಕೆ.ಎನ್. ರಾಮಕೃಷ್ಣ ಹೊಳ್ಳ, ಪ್ರಧಾನ ಕಾರ್ಯದರ್ಶಿ ಗಣೇಶ್ ಬೀರಂತಬೈಲು, ನವೀನ್ ಕೊರಕ್ಕೋಡು ಉಪಸ್ಥಿತರಿದ್ದರು. ಇದೇ ವೇಳೆ ಕಾಸರಗೋಡು ಪ್ರಖಂಡ ದುರ್ಗಾವಾಹಿನಿಯ ಸಂಯೋಜಕಿಯಾಗಿ ಸ್ವಾತಿ ನವೀನ್ ಕೊರಕ್ಕೋಡು, ಮಾತೃಶಕ್ತಿ ಸಹ ಸಂಯೋಜಕಿಯಾಗಿ ದಿವ್ಯಾ ಸಂದೀಪ್ ನಾಗರಕಟ್ಟೆ ಇವರನ್ನು ಆಯ್ಕೆ ಮಾಡಲಾಯಿತು.