ವೃದ್ಧ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ನೆಲ್ಲಿಕಟ್ಟೆ: ಸಂಪತ್ತಿಲ ನಿವಾಸಿ ರಾಮ ಪಾಟಾಳಿ (೭೯) ಎಂಬವರು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇವರು ಕಳೆದ ಎಂಟು ತಿಂಗಳಿಂದ ಮುಂಡಿತ್ತಡ್ಕ ಬಳಿಯ ಗುಣಾಜೆ ಕುಂಡಕಟ್ಟ ಎಂಬಲ್ಲಿರುವ ಅಣ್ಣನ ಮಗಳ ಮನೆಯಲ್ಲಿದ್ದರೆನ್ನ ಲಾಗಿದೆ. ರಾಮ ಪಾಟಾಳಿ ಬುಧವಾರ ರಾತ್ರಿ ಊಟ ಮಾಡಿ ಮಲಗಿದ್ದರು. ಗುರುವಾರ ಮನೆಯವರು ಎಚ್ಚೆತ್ತು ನೋಡಿದಾಗ ಬೆಡ್‌ರೂಂನಲ್ಲಿ ಫ್ಯಾನ್‌ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇವರಿಗೆ ಅಲ್ಪ ಕಾಲದಿಂದ ತೀವ್ರ ಅಸೌಖ್ಯ ಬಾಧಿಸಿತ್ತೆನ್ನಲಾಗಿದೆ. ಇದರಿಂದ ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿರ ಬಹುದೆಂದು ಹೇಳಲಾಗುತ್ತಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಂಪತ್ತಿಲದ ಮನೆ ಹಿತ್ತಿಲಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

Leave a Reply

Your email address will not be published. Required fields are marked *

You cannot copy content of this page