ಶಾಂತಿಗುರಿ ಶ್ರೀ ಮೂಕಾಂಬಿಕ ದೇವಸ್ಥಾನ ಬ್ರಹ್ಮಕಲಶಾಭಿಷೇಕ ಪೂರ್ವಭಾವಿ ಸಭೆ

ಉಪ್ಪಳ: ಬೇಕೂರು ಬಳಿಯ ಶಾಂತಿಗುರಿ ಶ್ರೀ ಮೂಕಾಂಬಿಕ ದೇವಸ್ಥಾನದಲ್ಲಿ ಇಂದಿನಿAದ ಆರಂಭಗೊಳ್ಳುವ ಶ್ರೀ ಮೂಕಾಂಬಿಕಾ ದೇವಿಯ ಪೀಠ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಮತ್ತು ಸಪರಿವಾರ ದೈವಗಳ ಪ್ರತಿಷ್ಠೆ, ಕಲಶಾಭಿಷೇಕ ಕಾರ್ಯಕ್ರಮದ ಪೂರ್ವಭಾವಿ ಸಭೆ ನಿನ್ನೆ ಸಂಜೆ ಕ್ಷೇತ್ರದಲ್ಲಿ ನಡೆಯಿತು. ಇಂದು ಸಂಜೆ ನಡೆಯುವ ಹೊರೆಕಾಣಿಕೆ ಮೆರವಣಿಗೆ ಹಾಗೂ ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮದ ವ್ಯವಸ್ಥೆಯ ತಯಾರಿ ಮಾಡಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ, ಮಾತೃ ಸಮಿತಿ, ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳ ಸಹಿತ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

RELATED NEWS

You cannot copy contents of this page