ಸಾಲದ ಹೊರೆ: ಕೊಡಕ್ಕಾಡ್‌ನಲ್ಲಿ ವೃದ್ಧ್ದ ನೇಣು ಬಿಗಿದು ಸಾವು

ಕಾಸರಗೋಡು: ಸಾಲ ಬಾಧೆ ಹಿನ್ನೆಲೆಯಲ್ಲಿ ಕೊಡಕ್ಕಾಡ್ ನಿವಾಸಿ ವೃದ್ಧ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚೀಮೇನಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಕ್ಕಾಡ್ ಓಲಾಟೆ ನಿವಾಸಿ ಒ. ರವೀಂದ್ರನ್ (70) ಆತ್ಮಹತ್ಯೆಗೈದವರು. ನಿನ್ನೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆ ಮಧ್ಯೆ ಘಟನೆ ನಡೆದಿದೆ. ಮನೆಯ ಮಹಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇವರು ಕಂಡು ಬಂದಿದ್ದರು. ಕೂಡಲೇ ಚೆರುವತ್ತೂರಿನ ಖಾಸಗಿ ಆಸ್ಪತ್ರೆಗೆ ಕೊಂಡುಹೋಗಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಚೀಮೇನಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಕೊಂಡುಹೋಗಲಾಗಿದೆ.

You cannot copy contents of this page