ಸಿಪಿಎಂ ಬ್ರಾಂಚ್ ಕಾರ್ಯದರ್ಶಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಣ್ಣೂರು: ಇಲ್ಲಿನ ಸಿಪಿಎಂ ಬ್ರಾಂಚ್ ಕಾರ್ಯದರ್ಶಿ ಮನೆಯ ಮಲಗುವ ಕೊಠಡಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಅಮ್ಮಾನಪ್ಪಾರ ನಿವಾಸಿ ರಾಜೇಶ್ ಓಮತ್ (47) ಮೃತಪಟ್ಟವರು. ನಿನ್ನೆ ಬೆಳಿಗ್ಗೆ ಮನೆಯ ಕೋಣೆಯೊಳಗೆ ಬಿದ್ದುಕೊಂಡ ಸ್ಥಿತಿಯಲ್ಲಿ ಪತ್ತೆಹಚ್ಚಲಾ ಗಿದೆ. ಕೂಡಲೇ ಕಣ್ಣೂರು ಸರಕಾರಿ ಮೆಡಿಕಲ್ ಕಾಲೇಜಿಗೆ ತಲುಪಿಸಿದರೂ ಆ ವೇಳೆ ಮೃತಪಟ್ಟಿದ್ದರು. ಸಿಪಿಎಂ ಅಮ್ಮಾನಪ್ಪಾರ ಸೆಂಟರ್ ಬ್ರಾಂಚ್ ಕಾರ್ಯದರ್ಶಿಯಾಗಿದ್ದಾರೆ. ಮೃತರು ಪತ್ನಿ ಟಿ. ಶಿಮ್ನ, ಮಕ್ಕಳಾದ ಆಶಿಶ್, ಅನ್ಶ್, ಸಹೋದರ ರಾಜು, ಸಹೋದರಿ ರತಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You cannot copy content of this page