ಸ್ಕೂಟರ್ನಲ್ಲಿ ಸಾಗಿಸುತ್ತಿದ್ದ ಗೋವಾ ಮದ್ಯ ಸಹಿತ ಓರ್ವ ಸೆರೆ
ಕಾಸರಗೋಡು: ನಗರದ ಹಳೆ ಬಸ್ ನಿಲ್ದಾಣದ ಪರಿಸರದಲ್ಲಿ ಅಬಕಾರಿ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರ್ನಲ್ಲಿ ಸಾಗಿಸುತ್ತಿದ್ದ 180 ಎಂ.ಎಲ್ನ 13 ಬಾಟಲಿ ಗೋವಾ ಮದ್ಯ ವಶಪಡಿ ಸಲಾಗಿದೆ. ಕೂಡ್ಲು ಕೋಟೆವಳಪ್ಪಿನ ಅಪ್ಪುಟ್ಟು ಅಲಿಯಾಸ್ ಸಂಜಯ್ ಕುಮಾರ್ ಎಂಬಾತನನ್ನು ಇದಕ್ಕೆ ಸಂಬಂಧಿಸಿ ಬಂಧಿಸಲಾಗಿದೆ. ಕಾಸರ ಗೋಡಿನ ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ನ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ (ಗ್ರೇಡ್) ಸಿಕೆವಿ ಸುರೇಶ್ ನೇತೃತ್ವದಲ್ಲಿ ಪ್ರಿವೆಂಟೀವ್ ಆಫೀಸರ್ ನೌಶಾದ್ ಕೆ, ಸಿವಿಲ್ ಎಕ್ಸೈಸ್ ಆಫೀಸರ್ ಅತುಲ್ ಟಿ.ವಿ ಎಂಬವರನ್ನೊಳಗೊಂಡ ಅಬಕಾರಿ ತಂಡ ಈ ಕಾರ್ಯಾಚರಣೆ ನಡೆಸಿದೆ.