ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ ಮದ್ಯ ವಶ: ಓರ್ವ ಸೆರೆ

ಉಪ್ಪಳ:  ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 8.64 ಲೀಟರ್ ಕರ್ನಾಟಕ ನಿರ್ಮಿತ ಮದ್ಯವನ್ನು ಮಂಜೇಶ್ವರ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಕಡಂಬಾರ್ ವಿಲ್ಲೇಜ್‌ನ ಅಂಗಡಿಪದವು ನಿವಾಸಿ ಬಿ.ಎಂ ಅನಿಲ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ. ಅಬಕಾರಿ ಇನ್ಸ್‌ಪೆಕ್ಟರ್ ಗಂಗಾಧರನ್ ಕೆ.ಪಿ, ಪ್ರಿವೆಂಟಿವ್ ಆಫೀಸರ್‌ಗಳಾದ ಸಾಜನ್ ಅಪ್ಯಾಲ್, ಎಂ.ಎಂ. ಪ್ರಸಾದ್, ಸಿವಿಲ್ ಎಕ್ಸೈಸ್ ಆಫೀಸರ್ ಪಿ.ವಿ. ಜಿತಿನ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.

You cannot copy contents of this page