ಸ್ಥಳ ನಾಮಗಳ ಮಲಯಾಳೀಕರಣ: ಅಧ್ಯಯನಕ್ಕೆ ಗಡಿ ಪ್ರಾಧಿಕಾರದಿಂದ ಪಂಚ ಸದಸ್ಯ ಸಮಿತಿ
ಕಾಸರಗೋಡು: ಕಾಸರಗೋಡು ಜಿಲ್ಲೆಯ ಕನ್ನಡ ನಾಮಾಂಕಿತ ಪ್ರದೇಶ, ಗ್ರಾಮ, ಸ್ಥಳ ನಾಮಗಳನ್ನು ನಿರಂತ ರವಾಗಿ ಮಲಯಾಳೀಕರಣ ಗೊಳಿಸ ಲಾಗುತ್ತಿದ್ದು, ಈ ಗಂಭೀರ ಸಮಸ್ಯೆಯ ಬಗ್ಗೆ ಅಧ್ಯಯನ ನಡೆಸಿ ಸೂಕ್ತ ಪರಿಹಾರ ಕಲ್ಪಿಸಲು ಕರ್ನಾಟಕ ರಾಜ್ಯ ಸರಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. ಕನ್ನಡದ ಸ್ಥಳ ನಾಮಗಳನ್ನು ಮಲಯಾಳೀಕರಣ ಗೊಳಿಸುತ್ತಿರುವ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಪ್ರಾಧಿಕಾರ ಪಂಚ ಸದಸ್ಯರ ತಜ್ಞ ಸಮಿತಿಯನ್ನು ನಿಯೋಜಿಸಿದ್ದು, ಅಧ್ಯಯನ ನಡೆಸಿ ವರದಿ ಸಲ್ಲಿಸಲು ಆದೇಶ ನೀಡಲಾಗಿದೆ. ಕಾಸರಗೋಡು ಸರಕಾರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಎ. ಶ್ರೀನಾಥ್, ನಿವೃತ್ತ ಉಪಜಿಲ್ಲಾಧಿಕಾರಿ ಕೆ. ಶಶಿಧರ ಶೆಟ್ಟಿ, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಸರಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ರತ್ನಾಕರ ಮಲ್ಲಮೂಲೆ ಹಾಗೂ ಸಂಘಟಕ ಸುಂದರ ಬಾರಡ್ಕ ಅವರನ್ನು ಸಮಿತಿ ಸದಸ್ಯರನ್ನಾಗಿ ನಿಯೋಜಿಸಿ ಆದೇಶ ಹೊರಡಿಸಲಾಗಿದೆ. ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ, ಕನ್ನಡ ಸಂಘಟಕ ಎ. ಆರ್. ಸುಬ್ಬಯ್ಯಕಟ್ಟೆ ಅವರ ಮನವಿ ಮೇರೆಗೆ ಸಮಿತಿಯನ್ನು ಘೋಷಿಸಲಾಗಿದ್ದು, ಸಮಿತಿ ಚಟುವಟಿ ಕೆಗಳ ಮೇಲ್ನೋಟವನ್ನು ಎ. ಆರ್. ಸುಬ್ಬಯ್ಯಕಟ್ಟೆ ವಹಿಸುವರು. ಸಮಿತಿಯ ಪ್ರಥಮ ಸಭೆ ಡಾ. ಮಲ್ಲಮೂಲೆ ಅವರ ನಿವಾಸ ಬನವಾಸಿಯಲ್ಲಿ ಜರಗಿದ್ದು, ಮುಂದಿನ ಕಾರ್ಯಯೋಜನೆಗಳಿಗೆ ರೂಪುರೇಷೆ ನೀಡಲಾಯಿತು.