ಹೋಟೆಲ್ ಮಾಲಕ ಆಟೋ ರಿಕ್ಷಾ ಢಿಕ್ಕಿ ಹೊಡೆದು ಮೃತ್ಯು

ಉಪ್ಪಳ: ಹೋಟೆಲ್ ಮಾಲಕ ಆಟೋ ರಿಕ್ಷಾ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ಕರ್ನಾಟಕದ ಪುತ್ತೂರು ಬಳಿಯ ಕೌಡಿಚ್ಚಾರು ಪಾಪೆಮಜಲು ನಿವಾಸಿ ಸುಭಾಷ್ ಕುಲಾಲ್ (50) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.    ಈ ಹಿಂದೆ  ಮಂಜೇಶ್ವರ ಬಳಿಯ ಕೋಳ್ಯೂರಿನಲ್ಲಿ ವಾಸಿಸುತ್ತಿದ್ದ ಇವರು ಮಜೀರ್ಪಳ್ಳದಲ್ಲಿ ಹೋಟೆಲ್ ನಡೆಸುತ್ತಿದ್ದರು. ಬಳಿಕ    ಕೌಡಿಚ್ಚಾರ್ ನಲ್ಲಿ ಹೋಟೆಲ್ ಆರಂಭಿಸಿದ್ದರು. ಕಳೆದ ಶುಕ್ರವಾರ ರಾತ್ರಿ ಹೋಟೆಲ್ ಮುಚ್ಚಿ ಆಟೋ ರಿಕ್ಷಾದಲ್ಲಿ ಪಾಪೆ ಮಜಲಿಗೆ ತೆರಳಿದ ಅವರು ರಿಕ್ಷಾದಿಂದಿಳಿದು ರಸ್ತೆ ದಾಟುತ್ತಿದ್ದ ವೇಳೆ ಬೇರೊಂದು ರಿಕ್ಷಾ ಅವರಿಗೆ ಢಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.  ಮೃತರು ಪತ್ನಿ ಬೇಬಿ, ಪುತ್ರಿ ನಿಶ್ಮಿತ  ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

RELATED NEWS
ಬದಿಯಡ್ಕದಲ್ಲಿ ಹಸಿರು ಕ್ರಿಯಾಸೇನೆಯಲ್ಲೂ ವಂಚನೆ: 4,000 ರೂ. ಯೂಸರ್ ಫೀಸ್ ಬ್ಯಾಂಕ್‌ನಲ್ಲಿ ಪಾವತಿಸಿ ಪಂ. ಕಚೇರಿಯಲ್ಲಿ ನೀಡಿದ ರಶೀದಿಯಲ್ಲಿ 40,000 ವಾಗಿ ತಿದ್ದುಪಡಿ; ಮಹಿಳಾ ಅಸೋಸಿಯೇಶನ್ ವಿಲ್ಲೇಜ್ ಅಧ್ಯಕ್ಷೆ ಸಹಿತ ಇಬ್ಬರನ್ನು ಕೆಲಸದಿಂದ ತೆರವು

You cannot copy contents of this page