೨೩.೭೬ ಲೀಟರ್ ಕರ್ನಾಟಕ ಮದ್ಯ ವಶ

ಕಾಸರಗೋಡು:ಮೊಗ್ರಾಲ್ ಪುತ್ತೂರು ಮಜಲ್‌ನ ಮನೆಯೊಂದರ ಸಮೀಪದ ಪೊದೆಯಲ್ಲಿ ಬಚ್ಚಿಡಲಾಗಿದ್ದ ೨೩.೭೬ ಲೀಟರ್ ಕರ್ನಾಟಕ ನಿರ್ಮಿತ ಮದ್ಯವನ್ನು ಕಾಸರಗೋಡು ಅಬಕಾರಿ ರೇಂಜ್ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ ಜೋಸೆಫ್ ಜೆ ನೇತೃತ್ವದ ತಂಡ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಕೂಡ್ಲು ಬೆದ್ರಡ್ಕದ ನರೇಂದ್ರ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  ಆದರೆ ಆರೋಪಿಯನ್ನು ಬಂಧಿಸಲು ಸಾಧ್ಯವಾಗಿಲ್ಲವೆಂದು ಅಬಕಾರಿ ತಂಡ ತಿಳಿಸಿದೆ.  ಈ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಪ್ರಿವೆಂಟೀವ್ ಆಫೀಸರ್ ರಾಜೀವನ್ ಎ.ವಿ, ಐ.ಬಿ ಪ್ರಿವೆಂಟೀವ್ ಆಫೀಸರ್ ಬಿಜೋಯ್ ಇ.ಕೆ, ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಶರತ್ ಕೆ.ಪಿ ಮತ್ತು ಶುಭ ಪಿ ಎಂಬಿವರು ಒಳಗೊಂಡಿದ್ದರು.

RELATED NEWS

You cannot copy contents of this page