೫.೫೮ ಲೀಟರ್ ಕರ್ನಾಟಕ ಮದ್ಯ ಸಹಿತ ಸ್ಕೂಟರ್ ವಶ

ಕಾಸರಗೋಡು: ನಗರದ ನೆಲ್ಲಿಕುಂಜೆಯಲ್ಲಿ  ಕಾಸರಗೋಡು ಅಬಕಾರಿ ರೇಂಜ್  ಕಚೇರಿಯ ಅಸಿಸ್ಟೆಂಟ್ ಇನ್‌ಸ್ಪೆಕ್ಟರ್ ಜೋಸೆಫ್ ಜೆ ನೇತೃತ್ವದ ಅಬಕಾರಿ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ೫.೫೮ ಲೀಟರ್ ಕರ್ನಾಟಕ ನಿರ್ಮಿ ತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂ ಡಿದೆ. ಈ ಮಾಲು ಸಾಗಿಸಲು ಬಳಸಿರುವುದಾಗಿ ಹೇಳಲಾಗುತ್ತಿರುವ ಸ್ಕೂಟರ್‌ನ್ನು ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡಿದೆ. ಇದಕ್ಕೆ ಸಂಬಂಧಿಸಿ ನಗರದ ನುಳ್ಳಿಪ್ಪಾಡಿ ನಿವಾಸಿ ಚಿಂತನ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳ ಲಾಗಿದೆಯೆಂದೂ  ಕಾರ್ಯಾಚರಣೆ ವೇಳೆ  ಆತ ಪರಾರಿಯಾಗಿರುವುದಾಗಿ ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಅಬಕಾರಿ ಇಲಾಖೆಯ ಸಿಇಒ ಮುರಳೀಧರನ್ ಮತ್ತು ಅತುಲ್ ಎಂಬವರು ಈ ಕಾರ್ಯಾಚರಣೆ ನಡೆಸಿದ ಅಬಕಾರಿ ತಂಡದಲ್ಲಿ ಒಳಗೊಂಡಿದ್ದರು.

Leave a Reply

Your email address will not be published. Required fields are marked *

You cannot copy content of this page