ಆಟೋರಿಕ್ಷಾದಲ್ಲಿ ಸಾಗಿಸತ್ತಿದ್ದ 108 ಲೀಟರ್ ಕರ್ನಾಟಕ ಮದ್ಯ ವಶ: ಓರ್ವ ಸೆರೆ

ಕಾಸರಗೋಡು: ಕೂಡ್ಲು ಗಂಗೆ ರಸ್ತೆ ಬಳಿ ಕಾಸರಗೋಡು ಎಕ್ಸೈಸ್ ರೇಂಜ್ ಪ್ರಿವೆಂಟೀವ್ ಆಫೀಸರ್ ಕೆ.ವಿ. ರಂಜಿತ್‌ರ ನೇತೃತ್ವದ ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ 108 ಲೀಟರ್ ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಆ ವಾಹನದಲ್ಲಿದ್ದ ಮಂಜೇಶ್ವರ ಕುಂಜತ್ತೂರು ನಿಶಾಂತ್ ನಿವಾಸದ ಬಿ. ಪ್ರಕಾಶ್ (36) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಮಾಲು ಸಾಗಿಸಲು ಬಳಸಲಾದ ಆಟೋರಿಕ್ಷಾವನ್ನು ಅಬಕಾರಿ ತಂಡ ವಶಪಡಿಸಿಕೊಂಡಿದೆ. ಈ ಅಬಕಾರಿ  ದಾಳಿ ನಡೆಸಿದ ತಂಡದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಎ.ವಿ. ಪ್ರಶಾಂತ್ ಕುಮಾರ್, ಎಂ. ಅನುರಾಗ್, ವಿ. ನಿಖಿಲ್, ಎನ್.ಎ. ಅಶ್ವಿನ್ ಮತ್ತು ಚಾಲಕ ಮೈಕಲ್ ಜೋಸೆಫ್ ಎಂಬವರು ಒಳಗೊಂಡಿದ್ದರು.

RELATED NEWS

You cannot copy contents of this page