ಮುನಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ ಸಭೆ

ಬದಿಯಡ್ಕ : ಮುನಿಯೂರು ಮುನಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಇದರ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮಾರ್ಚ್ 1ರಿಂದ 9ರ ತನಕ ನಡೆಯಲಿದೆ. ಇದರ ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ ಮಹಾ ಸಭೆ ಶ್ರೀ ಕ್ಷೇತ್ರದಲ್ಲಿ ಜರಗಿತು. ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ದೀಪ ಪ್ರಜ್ವಲಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಂಕರ ನಾರಾಯಣ ಮಯ್ಯ ಅಧ್ಯಕ್ಷತೆ ವಹಿಸಿದ್ದರು. ಹರಿನಾರಾಯಣ ನಡುವಂತಿಲ್ಲಾಯ ಪ್ರಾಸ್ತಾಪಿಸಿದರು. ಧಾರ್ಮಿಕ ಮುಖಂಡರಾದ ಬಿ ವಸಂತ ಪೈ, ಶ್ಯಾಮ್ ಭಟ್ ಏತಡ್ಕ, ಕೃಷ್ಣ ಭಟ್ ಅಜ್ಜಿಮೂಲೆ, ಹರಿನಾರಾ ಯಣ …

ತೆಂಗಿನಕಾಯಿ ತೆಗೆಯಲೆಂದು ಬಾವಿಗಿಳಿದು ಸಿಲುಕಿಕೊಂಡ ವ್ಯಕ್ತಿಗೆ ಅಗ್ನಿಶಾಮಕ ದಳದಿಂದ ರಕ್ಷಣೆ

ಕಾಸರಗೋಡು: ಬಾವಿಗೆ ಬಿದ್ದ ತೆಂಗಿನಕಾಯಿಗಳನ್ನು ತೆಗೆಯಲೆಂದು ಬಾವಿಗಿಳಿದು ಸಿಲುಕಿಕೊಂಡ ವ್ಯಕ್ತಿಯನ್ನು ಕಾಸರಗೋಡು ಅಗ್ನಿಶಾಮಕದಳ ರಕ್ಷಿಸಿದೆ. ತೆಂಗಿನಕಾಯಿಗಳನ್ನು ಸಂಗ್ರಹಿಸಿದ ಬಳಿಕ ಮೇಲೆ ಹತ್ತಲು ಯತ್ನಿಸುತ್ತಿದ್ದ ಮಧ್ಯೆ ಪ್ಲಾಸ್ಟಿಕ್ ಹಗ್ಗ ಜಾರಿ ಕೈತಪ್ಪಿ ಬಾವಿಗೆ ಬಿದ್ದ ಕಲ್ಲಿಕೋಟೆ ನರಿಕೂನಿ ನಿವಾಸಿ ಹಾಗೂ ಕುಂಬಳೆಯಲ್ಲಿ ವಾಸವಾಗಿರುವ ಶಬೀರ್ (39)ನನ್ನು ಅಗ್ನಿಶಾಮಕದಳ ಮೇಲೆತ್ತಿ ಪಾರು ಮಾಡಿದೆ. ನುಳ್ಳಿಪ್ಪಾಡಿಯ ರಾಜೇಂದ್ರ ಎಂಬವರ ಮನೆ ಹಿತ್ತಿಲಿನ ವಾಲಿಕೊಂಡಿದ್ದ ತೆಂಗನ್ನು ತಂತಿ ಉಪಯೋಗಿಸಿ ಎಳೆದು ಕಟ್ಟಲು ಇವರು ತಲುಪಿದ್ದರು. ಕೆಲಸದ ಮಧ್ಯೆ ಬಾವಿಗೆ ಬಿದ್ದ ತೆಂಗಿನಕಾಯಿಗಳನ್ನು ತೆಗೆಯಲೆಂದು …

ಬಿದ್ದು ಸಿಕ್ಕಿದ ಚಿನ್ನಾಭರಣವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಲ್ಯಾಬ್ ಟೆಕ್ನೀಷನ್

ಮೊಗ್ರಾಲ್: ಉಪ್ಪಳದಿಂದ ಮೊಗ್ರಾಲ್ ಪುತ್ತೂರಿಗಿರುವ ಬಸ್ ಪ್ರಯಾಣದ ಮಧ್ಯೆ ಕಳೆದುಹೋಗಿದ್ದ  ಅರ್ಧ ಪವನ್ ತೂಕದ ಚಿನ್ನಾಭರಣ ವನ್ನು ಮಾಲಕನಿಗೆ ಹಿಂತಿರುಗಿಸಿ ಮೊಗ್ರಾಲ್ ಸರಕಾರಿ ಯುನಾನಿ ಆಸ್ಪ ತ್ರೆಯ ಲ್ಯಾಬ್ ಟೆಕ್ನೀಷನ್ ಫಾತಿಮತ್ ಮುಮ್ತಾಸ್ ಪ್ರಾಮಾಣಿಕತೆ ಮೆರೆದಿದ್ದಾರೆ. ಮೊಗ್ರಾಲ್‌ನಿಂದ ಕಾಸರಗೋಡಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮುಮ್ತಾಸ್‌ಗೆ ಬಸ್‌ನ ಸೀಟಿನಿಂದ ಚಿನ್ನದ ಬ್ರೇಸ್‌ಲೆಟ್ ಬಿದ್ದು ಸಿಕ್ಕಿತ್ತು. ಮೊಗ್ರಾಲ್ ದೇಶೀಯವೇದಿ ಕಾರ್ಯಕರ್ತರನ್ನು ಸಂಪರ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಂದೇಶ ನೀಡಿದಾಗ ಅದರ ಮಾಲಕನಿಗೆ ಮಾಹಿತಿ ಲಭಿಸಿದ್ದು, ಕೂಡಲೇ ಅವರು ಮುಮ್ತಾಸ್‌ರನ್ನು …

ಉಪ್ಪಳ ದೇವಿಪ್ರಸಾದ್ ಮಾವೆ ಆಸ್ಪತ್ರೆಯಲ್ಲಿ ಯಶಸ್ವಿ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ

ಉಪ್ಪಳ: ಉಪ್ಪಳ ರೈಲ್ವೇ ನಿಲ್ದಾಣ ರಸ್ತೆಯ ದೇವಿಪ್ರಸಾದ್ ಮಾವೆ ಆಸ್ಪತ್ರೆಯಲ್ಲಿ ಲಾಪ್ರೋಸ್ಕೋಪಿಕ್ ಮುಖಾಂತರ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆಸಲಾಯಿತು. ಅತ್ಯಾಧುನಿಕ ವ್ಯವಸ್ಥೆಯೊಂದಿಗೆ ನಡೆಸಲಾದ ಈ ಶಸ್ತç ಚಿಕಿತ್ಸೆ ಮಂಜೇಶ್ವರ ತಾಲೂಕಿನಲ್ಲಿ ಪ್ರಥಮ ಎಂದು ಆಸ್ಪತ್ರೆಯ ಮಾಲಕ ಡಾ| ಶ್ರೀಧರ ಭಟ್ ತಿಳಿಸಿದ್ದಾರೆ. ಡಾ| ಲಿಖಿತ್ ರೈ ನೇತೃತ್ವದಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

ಎನ್‌ಟಿಯು ಕುಂಬಳೆ ಉಪಜಿಲ್ಲಾ ಸಮ್ಮೇಳನ, ಪದಾಧಿಕಾರಿಗಳ ಆಯ್ಕೆ

ಕುಂಬಳೆ: ದೇಶಿಯ ಅಧ್ಯಾಪಕ ಪರಿಷತ್ ( ಎನ್ ಟಿ ಯು) ಕುಂಬಳೆ ಉಪಜಿಲ್ಲಾ ಸಮ್ಮೇಳನ ನೀರ್ಚಾಲ್ ಮಹಾಜನ ಹೈಯರ್ ಸೆಕೆಂಡರಿ ಶಾಲೆ ಯಲ್ಲಿ ನಡೆಯಿತು. ಕುಂಬಳೆ ಉಪಜಿಲ್ಲಾ ಅಧ್ಯಕ್ಷ ಧ್ವಜಾರೋಹಣ ಗೈದರು. ಬದಿಯಡ್ಕ ಖಂಡ ಚಾಲಕ್ ರಮೇಶ ಕಲರಿ ದೀಪ ಬೆಳಗಿಸಿ ಉದ್ಘಾಟಿಸಿ ದರು. ಶಾಲಾ ಮೇನೇಜರ್ ಜಯದೇವ ಖಂಡಿಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕುಂಬಳೆ ಉಪಜಿಲ್ಲಾ ಅಧ್ಯಕ್ಷÀ ದಿನೇಶ್ ಕೆ ಅಧ್ಯಕ್ಷತೆ ವಹಿಸಿದರು. ಎನ್ ಟಿ ಯು ರಾಜ್ಯ ಉಪಾಧ್ಯಕ್ಷ ಪ್ರಭಾಕರನ್ ನಾಯರ್ , ರಾಜ್ಯ …

ದೇವರಗುಡ್ಡೆ ಶ್ರೀಶೈಲ ಮಹಾದೇವ ದೇವಸ್ಥಾನದಲ್ಲಿ ಧನುಪೂಜೆ ಆರಂಭ

ಕಾಸರಗೋಡು: ದೇವರಗುಡ್ಡೆ ಶ್ರೀ ಶೈಲ ಮಹಾದೇವ ಸನ್ನಿಧಿಯಲ್ಲಿ ಧನುರ್ಮಾಸ ಪ್ರಯುಕ್ತ ಧನುಪೂಜೆ ನಿನ್ನೆ ಆರಂಭಗೊAಡಿದ್ದು ಜ.14ರ ತನಕ ಜರಗಲಿದೆ. ಪಾರೆಕಟ್ಟೆ ಶ್ರೀ ಮುತ್ತಪ್ಪ ಕ್ಷೇತ್ರದಿಂದ ಭಜನಾ ಸಂಕೀರ್ತನೆಯೊAದಿಗೆ ಶ್ರೀ ಕ್ಷೇತ್ರಕ್ಕೆ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಶ್ರೀ ಮುತ್ತಪ್ಪ ಕ್ಷೇತ್ರದ ಪ್ರಮುಖರು, ಗಣೇಶ ಪಾರಕಟ್ಟೆ, ಕ್ಷೇತ್ರದ ಮಡೆಯನ್ಮಾರ್, ಭಜನಾ ಸಂಘದವರು, ಧನುಪೂಜಾ ಸಮಿತಿಯ ಕೆ.ಎನ್. ವೆಂಕಟ್ರಮಣ ಹೊಳ್ಳ, ಮಹೇಶ, ಸುಭಾಸ್ ಪಾಟಾಳಿ, ಗಣೇಶ ನಾಯ್ಕ, ನಿಶಾಂತ್, ಮಹಾಬಲ ರೈ, ಶ್ರೀನಿವಾಸ ನಾಯ್ಕ, ಕ್ಷೇತ್ರದ ಅರ್ಚಕ ರಾಮ ಭಟ್, ವಸಂತ, …