ಕಾರಡ್ಕ ಫೌಂಡೇಶನ್ ಟ್ರಸ್ಟ್‌ನ ಕಾರಡ್ಕ ಸಂಭ್ರಮ: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇಧದಲ್ಲಿ ಸೇರ್ಪಡೆಗೆ ಯತ್ನಿಸುವೆ- ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್

ಮುಳ್ಳೇರಿಯ: ತುಳು ಭಾಷಿಗರ ಹಲವು ಕಾಲದ ಬೇಡಿಕೆಯಾದ ಸಂವಿಧಾನದ ೮ನೇ ಪರಿಚ್ಛೇಧದ ಸೇರ್ಪಡೆಗೆ ಪಾರ್ಲಿಮೆಂಟ್‌ನಲ್ಲಿ ಪ್ರಸ್ತಾಪ ನಡೆಸಿದ್ದು, ಮುಂದೆಯೂ ಅದಕ್ಕಾಗಿ ತೀವ್ರ ಯತ್ನ ನಡೆಸುವೆನೆಂದು ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ನುಡಿದರು. ಅವರು ಮುಂಡೋಳು ಕ್ಷೇತ್ರದ ಸಭಾ ಭವನದಲ್ಲಿ ನಡೆದ ಕಾರಡ್ಕ ಫೌಂಡೇಶನ್ ಟ್ರಸ್ಟ್‌ನ ಕಾರಡ್ಕ ಸಂಭ್ರಮ, ಸಾಧಕರಿಗೆ ಪ್ರಶಸ್ತಿ ಪ್ರಧಾನ, ಶಿಷ್ಯರ ರಂಗಪ್ರವೇಶ, ಗುರುವಂದನಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಪುರಾಣ ಕತೆಗಳ ಮೂಲಕ ಭಕ್ತಿ ಪ್ರಧಾನ ಸಂಸ್ಕೃತಿ ಬೆಳೆಸುವ ಯಕ್ಷಗಾನ ಕಲೆಯನ್ನು ತಲೆಮಾರುಗಳಿಗೆ ಹಸ್ತಾಂತರಿಸಲು ಕಾರಡ್ಕ …

ವಿಸ್ಮಯ ಪಾರ್ಕ್‌ನಲ್ಲಿ ಇಟಾಲಿಯನ್ ರೈಡ್ ಸಿದ್ಧ

ಕಣ್ಣೂರು: ಪರಶ್ಶಿನಿಕಡವಿನ ವಿಸ್ಮಯ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಹೊಸ ಇಟಾಲಿಯನ್ ರೈಡ್ ರೋಡಿಕ್ಸ್ ಸಿದ್ಧಗೊಂಡಿದೆ. ೧೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಪೂರ್ತಿಗೊಳಿಸಲಾಗಿದೆ. ಅಡ್ವೆಂಚರ್ ರೈಡ್ ರೋಡಿಕ್ಸ್ ಇದನ್ನು ಸ್ಪೀಕರ್ ಎ.ಎನ್. ಶಂಸೀರ್ ನಾಳೆ ಬೆಳಿಗ್ಗೆ ಉದ್ಘಾಟಿಸುವರು. ಒಂದು ಬಾರಿ 24 ಮಂದಿಗೆ ರೈಡ್ ನಡೆಸಬಹುದಾದ 22 ಮೀಟರ್ ಎತ್ತರದಲ್ಲಿ ತಿರುಗುವ ಇದು 360 ಡಿಗ್ರಿಯಲ್ಲಿ ತಿರುಗುತ್ತದೆ. ಸಾಹಸಿಕತೆಯನ್ನು ಇಷ್ಟಪಡುವ ಯುವಕರು ಹಾಗೂ ಕುಟುಂಬ ಇದರಲ್ಲಿ ಭಾಗವಹಿಸಬಹುದೆಂದು ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇಮ್ಮಡಿ ಸೇಫ್ಟಿ ಸಿಸ್ಟಂ ರೈಡ್‌ನಲ್ಲಿ ಒಳಪಡಿಸಲಾಗಿದೆ …

ಬಿದ್ದು ಸಿಕ್ಕಿದ ಚಿನ್ನ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬಟ್ಟು ಮೂಲ್ಯ

ಬಾಯಾರು: ದಾರಿಯಲ್ಲಿ ಬಿದ್ದು ಸಿಕ್ಕಿದ ೨ ಪವನ್‌ನ ಚಿನ್ನದ ಕಾಲ್ಗೆಜ್ಜೆಯನ್ನು ವಾರಸುದಾರಳಿಗೆ ಹಿಂತಿರುಗಿಸಿ ಕೂವೆತ್ತೋಡಿ ನಿವಾಸಿ ಬಟ್ಟು ಮೂಲ್ಯ ಪ್ರಾಮಾಣಿಕತೆ ಮೆರೆದಿದ್ದಾರೆ. ಇವರು ನಡೆದು ಹೋಗುತ್ತಿದ್ದಾಗ ದಾರಿಯಲ್ಲಿ ಬಿದ್ದು ಸಿಕ್ಕಿದ ಚಿನ್ನವನ್ನು ಅದರ ವಾರಿಸು ದಾರರನ್ನು ಪತ್ತೆಹಚ್ಚಿ ಹಿಂತಿರುಗಿಸಿದ ಇವರ ಪ್ರಾಮಾಣಿಕತೆಗೆ ಸ್ಥಳೀಯರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕನಿಯಾಲ ಪಳ್ಳಿತ್ತಡ್ಕ ನಿವಾಸಿಯಾದ ಮಹಿಳೆಯೋರ್ವರ ಆಭರಣ ಇದಾಗಿತ್ತೆಂದು ಅವರು ತಿಳಿಸಿದ್ದಾರೆ.

ಮಹಿಳೆಯರಿಗೆ ತಿಂಗಳಿಗೆ 1000 ರೂ. ನೀಡುವ ಸ್ತ್ರೀ ಸುರಕ್ಷಾ ಯೋಜನೆ: ಇಂದಿನಿಂದ ಅರ್ಜಿ ಸ್ವೀಕಾರ

ತಿರುವನಂತಪುರ: ರಾಜ್ಯದ ಮಹಿಳೆಯರ ಕ್ಷೇಮ ಖಚಿತಪಡಿಸಲು ರಾಜ್ಯ ಸರಕಾರ ಘೋಷಿಸಿದ ಸ್ತ್ರೀ ಸುರಕ್ಷಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಇಂದಿನಿಂದ ಸ್ಥಳೀಯಾಡಳಿತ ಸಂಸ್ಥೆ ಇಲಾಖೆಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತಿದೆ. ksmart.lsgkerala.gov.in ಎಂಬ ವೆಬ್‌ಸೈಟ್ ಮೂಲಕ ಸ್ಥಳೀಯಾಡಳಿತ ಸಂಸ್ಥೆಗಳ ಕಾರ್ಯದರ್ಶಿಗೆ ಅರ್ಜಿ ಸಲ್ಲಿಸಬೇಕಾಗಿದೆ. ಪ್ರಸ್ತುತ ರಾಜ್ಯದ ಯಾವುದೇ ಇತರ ಪಿಂಚಣಿಗಳನ್ನು ಪಡೆಯದ ಮಹಿಳೆಯರು ತಿಂಗಳಿಗೆ 1000 ರೂ.ನಂತೆ ಧನಸಹಾಯ ಅರ್ಹರಾಗಿದ್ದಾರೆ ಎಂದು ಸ್ಥಳೀಯಾಡಳಿತ ಇಲಾಖೆ ಪ್ರಿನ್ಸಿಪಲ್ ಡೈರೆಕ್ಟರ್ ತಿಳಿಸಿದ್ದಾರೆ. ಕೇರಳದಲ್ಲಿ ಖಾಯಂ ವಾಸವಾಗಿರುವ ೩೫ರಿಂದ 60ರ ಮಧ್ಯೆ ಪ್ರಾಯದ ಮಹಿಳೆಯರು, ಟ್ರಾನ್ಸ್ …