ಸೂರ್ಯನಿಗೇ ಸವಾಲು: ಮಂಗಲ್ಪಾಡಿ ಪಂ. ವ್ಯಾಪ್ತಿಯಲ್ಲಿ ಹಗಲಿಡೀ ಉರಿಯುತ್ತಿರುವ ಬೀದಿ ದೀಪಗಳು

ಉಪ್ಪಳ: ಹಗಲಿನ ಸೂರ್ಯ ಪ್ರಕಾಶಕ್ಕೆ ಸವಾಲೊಡ್ಡುವ ರೀತಿಯಲ್ಲಿ ಮಂಗಲ್ಪಾಡಿ ಪಂಚಾಯತ್‌ನ ವಿವಿಧ ಕಡೆಗಳಲ್ಲಿ ಬೀದಿ ದೀಪಗಳು ಉರಿಯುತ್ತಿರುವುದು ಕಂಡುಬಂದಿದೆ. ಹಗಲೂರಾತ್ರಿ ತಿಂಗಳುಗಳಿಂದ ಸತತವಾಗಿ  ಲೋ ಮಾಸ್ಟ್ ಬೀದಿ ದೀಪಗಳು ಉರಿಯುತ್ತಿದ್ದು ಇದನ್ನು ನಿಯಂತ್ರಿಸಲು ಪಂಚಾಯತ್‌ನಲ್ಲಿ ಯಾರೂ ಮುಂದಾಗದಿರುವುದು ಕಂಡು ಬಂದಿದೆ. ಪೆರಿಂಗಡಿ ರಸ್ತೆಯ ಜನಪ್ರಿಯ ಎಂಬಲ್ಲಿ ಸರ್ವೀಸ್ ರಸ್ತೆ ಬದಿಯಲ್ಲಿ ಹಾಗೂ ಕುಬಣೂರು ರಸ್ತೆಯ ಪುಳಿಕುತ್ತಿ ಸ್ಮಶಾನದ ಬಳಿ ಕಳೆದ ಒಂದು ತಿಂಗಳಿಂದ ಸತತವಾಗಿ  ಲೋ ಮಾಸ್ಟ್ ಬೀದಿ ದೀಪ ಉರಿಯುತ್ತಿದೆ. ಇದೇ ರೀತಿ ಪಂಚಾಯತ್ ವ್ಯಾಪ್ತಿಯ …

ಕೇರಳದ ಎಲ್ಲಾ ಸರಕಾರಿ ಸೇವೆಗಳಿಗಾಗಿ ಬರಲಿದೆ ಖಾಯಂ ರಾಜ್ಯ ಗುರುತು ಚೀಟಿ

ತಿರುವನಂತಪುರ: ಕೇರಳದ ಎಲ್ಲಾ ಸರಕಾರಿ ಸೇವೆಗಳಿಗಾಗಿ ಬರಲಿದೆ ಖಾಯಂ ಗುರುತುಚೀಟಿ. ಮುಖ್ಯಮಂತ್ರಿ ಪಿಣರಾಯಿ ವಿಜಯನ್  ಈ ವಿಷಯ ತಿಳಿಸಿದ್ದಾರೆ. ಕೇರಳದಲ್ಲಿ ಜನಿಸಿದವರೆಂಬುವುದನ್ನು ಸಾಬೀತುಪಡಿಸಲು ಒಂದು ಅಧಿಕೃತ ಗುರುತು ಚೀಟಿಯಾಗಿ ಫೋಟೋ ಲಗತ್ತಿಸಿದ ಇಂತಹ ನೇಟಿವಿಟಿ ಕಾರ್ಡ್ ವಿತರಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಆದರೆ ಇದು ಒಂದು ಕಾನೂನಾತ್ಮಕ ದಾಖಲುಪತ್ರವಲ್ಲವೆಂದೂ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ಈ ಕಾರ್ಡನ್ನು ಸರಕಾರದ ಎಲ್ಲಾ ಸೇವೆಗಳಿಗಾಗಿ ಉಪಯೋಗಿಸಬಹುದಾಗಿದೆ. ನೇಟಿವಿಟಿ ಸರ್ಟಿಫಿಕೇಟಿನ ಪರ್ಯಾಯವಾಗಿ ಇದನ್ನು …

ಬದಿಯಡ್ಕ ಪಂ. ವಿಜೇತ ಬಿಜೆಪಿ ಅಭ್ಯರ್ಥಿಗಳಿಂದ ಎಡನೀರು ಶ್ರೀ ಭೇಟಿ

 ಬದಿಯಡ್ಕ: ಇತ್ತೀಚೆಗೆ ನಡೆದ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ವಿಜೇತ ಬಿಜೆಪಿ ಅಭ್ಯರ್ಥಿಗಳು ಎಡನೀರು ಮಠಕ್ಕೆ ಭೇಟಿ ನೀಡಿ  ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದುಕೊಂಡರು. ಪಕ್ಷದ ಪ್ರಮುಖ ಡಿ.ಕೆ. ನಾರಾಯಣನ್ ನಾಯರ್, ಜಿಲ್ಲಾ ಪಂಚಾಯತ್ ಬದಿಯಡ್ಕ ಡಿವಿಶನ್ ಅಭ್ಯರ್ಥಿ ರಾಮಪ್ಪ ಮಂಜೇಶ್ವರ, ನೀರ್ಚಾಲು ಬ್ಲೋಕ್ ಸದಸ್ಯ ಮಹೇಶ್ ವಳಕ್ಕುಂಜ, ಬದಿಯಡ್ಕ ಪಂ. ಅರ್ಥಿಗಳಾದ ಡಿ. ಶಂಕರ, ಅಶ್ವಿನಿ ಕೆ.ಎಂ., ಹರೀಶ, ಶ್ಯಾಮಪ್ರಸಾದ ಸರಳಿ, ಮಧುಸೂದನ, ಉಷಾ ಪಳ್ಳತ್ತಡ್ಕ, ರಜನಿ ಸಂದೀಪ್, ಬಿಂದ್ಯಾ ಕಾರ್ತಿಕ್ ಜೊತೆಗಿದ್ದರು.

ರೈಲ್ವೇ ದರ ಹೆಚ್ಚಳ: ಡಿವೈಎಫ್‌ಐಯಿಂದ ರೈಲು ನಿಲ್ದಾಣಕ್ಕೆ ಮಾರ್ಚ್

ಕಾಸರಗೋಡು: ರೈಲ್ವೇ ಹೆಚ್ಚಿಸಿದ  ದರವನ್ನು ಹಿಂತೆಗೆಯಬೇಕು, ಆಗಾಗ ಪ್ರಯಾಣ ದರವನ್ನು ಹೆಚ್ಚಿಸುವ ರೈಲ್ವೇಯ  ನಿಲುವು ಪ್ರತಿಭಟಿಸಿ  ಡಿವೈಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಸರಗೋಡು ರೈಲ್ವೇ ನಿಲ್ದಾಣಕ್ಕೆ ಪ್ರತಿಭಟನಾ ಮಾರ್ಚ್ ನಡೆಸಲಾಯಿತು. ಜಿಲ್ಲಾ ಕಾರ್ಯದರ್ಶಿ ರಜೀಶ್ ವೆಳ್ಳಾಡ್ ಉದ್ಘಾಟಿಸಿದರು. ಜಿಲ್ಲಾ ಜೊತೆ ಕಾರ್ಯದರ್ಶಿ ಪಿ. ಶಿವಪ್ರಸಾದ್ ಅಧ್ಯಕ್ಷತೆ ವಹಿಸಿದರು. ಜ್ಯೋತಿ ಚೆನ್ನಿಕ್ಕರೆ, ರಂಜಿನಿ ಕಾರಡ್ಕ, ಪ್ರವೀಣ್ ಪಾಡಿ, ಇಮ್ಯಾನುವೆಲ್ ಮಾತನಾಡಿದರು. ಜಿಲ್ಲಾ ಸೆಕ್ರೆಟರಿ ಯೇಟ್ ಸದಸ್ಯ ಸುಭಾಷ್ ಪಾಡಿ ಸ್ವಾಗತಿಸಿದರು. ತಾಯಲಂಗಾಡಿ ಯಿಂದ ಮೆರವಣಿಗೆ ಆರಂಭಗೊಂಡಿತು.

ಕುಂಬಳೆ ಅಗ್ರಿಕಲ್ಚರಿಸ್ಟ್ ಸಹಕಾರಿ ಸಂಘ ವಾರ್ಷಿಕ ಮಹಾಸಭೆಯಲ್ಲಿ ಭಾವಚಿತ್ರ ಅನಾವರಣ

ಕಾಸರಗೋಡು: ಕುಂಬಳೆ ಅಗ್ರಿಕಲ್ಚರಿಸ್ಟ್ ವೆಲ್ಫೇರ್ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಸ್ಥಾಪಕ ಅಧ್ಯಕ್ಷರಾಗಿದ್ದ ಪಿ. ಕೃಷ್ಣ ಚೆಟ್ಟಿಯಾರ್ ಅವರ ಭಾವಚಿತ್ರ ಅನಾವರಣಗೊಳಿಸಲಾಯಿತು. ಶಾಸಕ ಸಿ.ಎಚ್. ಕುಂಞಂಬು, ಅಸಿಸ್ಟೆಂಟ್ ರಿಜಿಸ್ಟ್ರಾರ್ ಜನರಲ್ ರವೀಂದ್ರ,ಸಂಘದ ಎ ಕ್ಲಾಸ್ ಸದಸ್ಯರ ಮಕ್ಕಳಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ಪಿ. ಕೃಷ್ಣ ಚೆಟ್ಟಿಯಾರ್ ಸ್ಮಾರಕ ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ವಿತರಿಸಿದರು. ಸಂಘದ ಅಧ್ಯಕ್ಷ ಕೆ. ಶಿವಪ್ಪ ರೈ ಅಧ್ಯಕ್ಷತೆ ವಹಿಸಿದರು. ಸಹಕಾರಿಗಳಾದ  ಪಿ. ರಘುದೇವನ್, ಸಿ.ಎ ಸುಬೈರ್, …