ತಂದೆಯ ಆರೈಕೆಗಾಗಿ ಆಸ್ಪತ್ರೆಯಲ್ಲಿದ್ದ ಪುತ್ರ 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಪಯ್ಯನ್ನೂರು: ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯ 7ನೇ ಮಹಡಿಯಿಂದ ಹಾರಿ ರೋಗಿಯ ಜೊತೆಗೆ ನಿಲ್ಲಲು ತಲುಪಿದ್ದ ವ್ಯಕ್ತಿ ಮೃತಪಟ್ಟರು. ಶ್ರೀಕಂಠಪುರ ಕಾನಿಲೇರಿ ಆಲಕುನ್ನು ಥೋಮಸ್- ತ್ರೇಸಿಯಮ್ಮ ದಂಪತಿ ಪುತ್ರ ಟೋಮ್ ಥೋಮ್ಸನ್ (40) ಮೃತಪಟ್ಟವರು. ಇಂದು ಮುಂಜಾನೆ 1 ಗಂಟೆ ವೇಳೆ ಘಟನೆ ನಡೆದಿದೆ.  ಟೋಮ್ ಥೋಮ್ಸನ್‌ರ ತಂದೆ ಥೋಮಸ್ ಹರ್ನಿಯ ಆಪರೇಶನ್ ಮುಗಿಸಿ ವಾರ್ಡ್‌ನಲ್ಲಿ ಚಿಕಿತ್ಸೆಯಲ್ಲಿದ್ದಾರೆ. ತಂದೆಯನ್ನು ಶುಶ್ರೂಷಿಸಲು ನಿಂತಿದ್ದ ಟೋಮ್ ಥೋಮ್ಸನ್ ಇಂದು ಮುಂಜಾನೆ 1 ಗಂಟೆ ವೇಳೆ ಗಲಭೆ ಸೃಷ್ಟಿಸಿರುವುದಾಗಿ ಹೇಳಲಾಗುತ್ತಿದೆ. ಭದ್ರತಾ …

ಗಲ್ಫ್ ಉದ್ಯೋಗಿ ಮನೆಯಿಂದ ಕಳವು

ಕಾಸರಗೋಡು:  ಗಲ್ಫ್ ಉದ್ಯೋಗಿ ಯಾದ ಉದುಮ ಬಾರಾದ ಮುರಳಿ ಎಂಬವರ ಮನೆಯಿಂದ ೮ ಪವನ್ ಚಿನ್ನಾಭರಣ ಹಾಗೂ ೫ ಸಾವಿರ ರೂಪಾಯಿ ಕಳವಿಗೀಡಾದ ಬಗ್ಗೆ ವರದಿಯಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕಪಾಟಿ ನಲ್ಲಿದ್ದ ನಗ-ನಗದು ದೋಚಿದ್ದಾರೆ.  ಮುರಳಿ ಗಲ್ಫ್‌ನಲ್ಲಿದ್ದಾರೆ.   ಮುರಳಿ ಅವರ ಪತ್ನಿ ಹಾಗೂ ಮಕ್ಕಳು ಸಮೀಪದಲ್ಲಿರುವ ಮುರಳಿಯ ತಂದೆಯ ಮನೆಯಲ್ಲಿ ವಾಸಿಸುತ್ತಿದ್ದರು. ಇಂದು ಬೆಳಿಗ್ಗೆ ಅಲ್ಲಿಂದ ಸ್ವಂತ ಮನೆಗೆ  ತೆರಳಿದಾಗ  ಕಳ್ಳರು ಮನೆಗೆ ನುಗ್ಗಿದ ವಿಷಯ …

ಹೊಲಿಗೆ ಕಾರ್ಮಿಕರ ವೆಲ್ಫೇರ್ ಫಂಡ್ ಕಾಯ್ದೆ ಸಮಸ್ಯೆ ಬಗ್ಗೆ ಶಾಸಕರಿಂದ ಪರಿಹಾರ ಭರವಸೆ

ಹೊಸಂಗಡಿ: ಕೇರಳ ರಾಜ್ಯ ಹೊಲಿಗೆ ಕಾರ್ಮಿಕರಿಗೆ ಟೆÊಲರಿಂಗ್ ವೆಲ್ಫೇರ್ ಫಂಡ್ ಕಾಯ್ದೆ ಪ್ರಕಾರ ಕ್ಷೇ ಮನಿಧಿಯಲ್ಲಿ ನೋಂದಾಯಿಸಿ ಕೊಂಡರೂ ಪರಿಷ್ಕೃತ ಕಾನೂನು ವಿಧೇಯ ಪಿಂಚಣಿ ದೊರೆಯದೆ ಇರುವ ಸಮಸ್ಯೆಯನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ ನ್ಯಾಯ ದೊರಕಿಸಿ ಕೊಡುವುದಾಗಿ ಶಾಸಕ ಎಕೆಎಂ ಅಶ್ರಫ್ ಭರವಸೆ ಇತ್ತರು. ಹೊಸಂಗಡಿ ವ್ಯಾಪಾರಿ ಭವನದಲ್ಲಿ ನಡೆದ ಕೇರಳ ಸ್ಟೇಟ್ ಟÉÊಲರ್ಸ್ ಅಸೋಸಿಯೇಷನ್ (ಕೆಎಸ್‌ಟಿಎ) ಮಂಜೇಶ್ವರ ತಾಲೂಕು ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕ್ಷೇಮನಿಧಿ ಯೋಜನೆಯಲ್ಲಿ ಸೀನಿಯಾರಿಟಿಯಂತೆ ಪಿಂಚಣಿ ನೀಡುವ ವ್ಯವಸ್ಥೆ ಅಳವಡಿಸಿಲ್ಲ, ಅನುಗುಣವಾದ …

ಜನಪ್ರತಿನಿಧಿಗಳು ಕೇಂದ್ರ ಯೋಜನೆಗಳ ಪ್ರಚಾರಕರಾಗಬೇಕು- ವಿ.ಕೆ. ಸಜೀವನ್

ಕಾಸರಗೋಡು: ಗರಿಷ್ಠ ಸಂಖ್ಯೆಯ ಪ್ರಜೆಗಳನ್ನು ಪ್ರಧಾನಮಂತ್ರಿಯವರ ಕ್ಷೇಮ ಯೋಜನೆಗಳ ಫಲಾನುಭವಿಗಳಾಗಿಸಲು ಬಿಜೆಪಿ ಜನಪ್ರತಿನಿಧಿಗಳು ಮುಂದೆ ಬರಬೇಕೆಂದೂ, ಜನಕ್ಷೇಮ ಯೋಜನೆಗಳ ಪ್ರಚಾರಕರಾಗಿ ಅವರು ಕಾರ್ಯಾಚರಿಸಬೇಕೆಂದು ಬಿಜೆಪಿ ರಾಜ್ಯ ಸೆಲ್ ಕೋ-ಆರ್ಡಿನೇಟರ್ ವಿ.ಕೆ. ಸಜೀವನ್ ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾ ಸಮಿತಿ ಕಚೇರಿಯಲ್ಲಿ ನಡೆದ ಬಿಜೆಪಿ ಜನಪ್ರತಿನಿಧಿಗಳ ಮೊದಲ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರ ಮೋದಿ ಸರಕಾರದ ಜನಕ್ಷೇಮ ಯೋಜನೆಗಳು ಕೇರಳದಲ್ಲಿ ಜ್ಯಾರಿಗೊಂಡರೆ ಬಿಜೆಪಿಗೆ ರಾಜಕೀಯ ಸಾಧನೆ ಉಂಟಾಗಲಿದೆ ಎಂದು ಪಿಣರಾಯಿ ವಿಜಯನ್ ಸರಕಾರ ಭಯಪಡುತ್ತಿದೆ. ಆದ್ದರಿಂದ  ಹಲವು ಕೇಂದ್ರ …

ಹೊಳೆ ಮರಳು ಸಾಗಾಟ: ಪಿಕಪ್ ವಾಹನ ಸಹಿತ ಐದು ಮಂದಿ ಸೆರೆ

ಕುಂಬಳೆ: ಪುತ್ತಿಗೆ ಸೇತುವೆ ಬಳಿ ಕುಂಬಳೆ ಎಸ್‌ಐ ಕೆ. ಶ್ರೀಜೇಶ್, ಎಎಸ್‌ಐ ಅಮಿತ್‌ರಾಜ್ ನೇತೃತ್ವದ ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಪಿಕಪ್ ವಾಹನದಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಹೊಳೆಯ ಮರಳು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಅಂಗಡಿಮೊಗರು ಬುಲಯಾಲಂನ ಅಬ್ದುಲ್ ಫೈಸಲ್ ಬುಲಯಾಲಂ (36) ಅಂಗಡಿಮೊಗರು ಪೆರಿಯಾ ಮೊಗರ್ ಹೌಸ್ ನಿವಾಸಿಗಳಾದ ಅಬ್ದುಲ್ ಅಸೀಸ್ (38), ಅಬ್ದುಲ್ ರಝಾಕ್ (40), ಅಂಗಡಿಮೊಗರು ಪುಳಕ್ಕರ ಹೌಸಿನ ಅಬ್ದುಲ್ ಫತ್ತಾಹ್ (21), ಅಂಗಡಿಮೊಗರು ಶೆರುಲಾಬಾದ್ ಹೌಸಿನ ಖಾಲಿದ್ ಎಸ್.ಎ. (೪೫) ಎಂಬವರನ್ನು …

ಲಾಲ್ಬಾಗ್- ಕುರುಡಪದವು ರಸ್ತೆ ದುರಸ್ತಿ : ಬದಲಿ ಸಂಚಾರ ರಸ್ತೆ ಸ್ಥಳೀಯರಿಂದ ದುರಸ್ತಿ

ಪೈವಳಿಕೆ: ಲಾಲ್ಬಾಗ್- ಕುರುಡಪದವು ರಸ್ತೆ ಅಭಿವೃದ್ಧಿ ಹಿನ್ನೆಲೆಯಲ್ಲಿ ದುರಸ್ತಿ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದಾಗಿ ಈ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿಯಂತ್ರಣ ಏರ್ಪಡಿಸಲಾಗಿದೆ. ಪ್ರಸ್ತುತ ವಾಹನಗಳು ಬದಲಿ ರಸ್ತೆಯಾದ ಚಿಪ್ಪಾರು ಶ್ರೀ ವಿಷ್ಣುಮೂರ್ತಿ ಕ್ಷೇತ್ರ ಬಳಿಯಲ್ಲಿ ಸಂಚರಿಸಬೇಕಾಗುತ್ತಿದ್ದು, ಈ ರಸ್ತೆ ಇಕ್ಕಟ್ಟಾಗಿ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಮೀದ್ ಡ್ರೈವರ್ ಚಿಪ್ಪಾರು, ರೋಷನ್ ಡಿಸೋಜ ಅಮ್ಮೇರಿ, ನೌಫಲ್ ಚಿಪ್ಪಾರು ಹಾಗೂ ಸ್ಥಳೀಯರ ಸಹಕಾರದಲ್ಲಿ ಜೆಸಿಬಿ ಬಳಸಿ ರಸ್ತೆಯನ್ನು ದುರಸ್ತಿಗೊಳಿಸಲಾಗಿದೆ. ಲಾಲ್ಬಾಗ್-ಅಮ್ಮೇರಿ ತನಕದ ಮೂರೂವರೆ ಕಿಲೋಮೀಟರ್ ರಸ್ತೆಯನ್ನು ಅಭಿವೃದ್ಧಿಗೊಳಿಸುವ …