ಮಾದಕಪದಾರ್ಥ ಸಾಗಾಟ: ಸೆರೆಯಾಗಿ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಆರೋಪಿ ಸಹಿತ ಇಬ್ಬರು ಉದುಮದ ವಸತಿಗೃಹದಲ್ಲಿ ಸೆರೆ
ಕಾಸರಗೋಡು: ಉದುಮ ಪಳ್ಳಂನ ವಸತಿಗೃಹದಲ್ಲಿ ಬೇಕಲ ಪೊಲೀಸರು ನಡೆಸಿದ ದಾಳಿಯಲ್ಲಿ ಇಬ್ಬರು ಸೆರೆಗೀಡಾಗಿದ್ದಾರೆ. ಪಳ್ಳಿಕ್ಕೆರೆ, ಪಳ್ಳಿಪುಳ ಸ್ನೇಹಾಲಯದ ಗೋಕುಲ್ರಾಜ್ (25), ಉದುಮ ಪಳ್ಳಂನ ಚಾಮತ್ತೋಟ್ಟಂ ಹೌಸ್ ನಿವಾಸಿ ಅನೀಶ್ ನಾರಾಯಣ (31) ಎಂಬಿವರನ್ನು ಬೇಕಲ ಎಸ್ಐ ಪಿ. ಅಖಿಲ್ ಹಾಗೂ ತಂಡ ಸೆರೆಹಿಡಿದಿದೆ. ಸೋಮವಾರ ಸಂಜೆ ಎಸ್ಐಯವರ ನೇತೃತ್ವದಲ್ಲಿ ಪಳ್ಳಂನ ಕೋಡಂಗೈ ವಸತಿಗೃಹದಲ್ಲಿನ 101ನೇ ನಂಬ್ರ ಕೊಠಡಿಗೆ ದಾಳಿ ನಡೆಸಲಾಗಿತ್ತು. ಇಲ್ಲಿಂದ 3.87 ಗ್ರಾಂ ಎಂಡಿಎಂಎ ಹಾಗೂ ಮಾದಕಪದಾರ್ಥ ಉಪ ಯೋಗಿಸುವುದಕ್ಕಿರುವ ಸಾಮಗ್ರಿಗಳನ್ನು ಪೊಲೀಸರು ವಶಪಡಿ ಸಿದ್ದರು. …