ವಿಮಾನ ದುರಂತ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಹಿತ ಆರು ಮಂದಿ ದುರ್ಮರಣ

ಮುಂಬೈ: ಮಹಾರಾಷ್ಟ್ರದ ಬಾರಾಮತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ವಿಮಾನ ದುರಂತದಲ್ಲಿ ಎನ್‌ಸಿಪಿ ನೇತಾರ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(66) ಸೇರಿದಂತೆ  ಆರು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಜಿಲ್ಲಾ ಪರಿಷತ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಬೆಳಿಗ್ಗೆ 8.10ಕ್ಕೆ ಲಿಯರ್‌ಜೆಟ್-45 ಎಂಬ ವಿಮಾನದಲ್ಲಿ ಅಜಿತ್ ಪವಾರ್ ಮತ್ತು ಇತರ ೫ ಮಂದಿ ಸಿಬ್ಬಂದಿಗಳು ಬಾರಾಮತಿಗೆ  ತೆರಳಿದ್ದರು.   ವಿಮಾನ ಅಲ್ಲಿ ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ  ಬಿದ್ದು ಸ್ಫೋಟಗೊಂಡು ಸಂಪೂರ್ಣವಾಗಿ ಉರಿದುಹೋಗಿದೆ ಯೆಂದು ಪ್ರತ್ಯಕ್ಷದರ್ಶಿಗಳು …

ಅಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ 146 ಲೀಟರ್ ಮದ್ಯ ವಶ: ಓರ್ವ ಸೆರೆ

ಕುಂಬಳೆ: ಕುಂಬಳೆಯಲ್ಲಿ ಕಾಸರಗೋಡು ಎಕ್ಸೈಸ್ ಎನ್‌ಫೋರ್ಸ್‌ಮೆಂಟ್ ಆಂಡ್ ಆಂಟಿ ನರ್ಕೋಟಿಕ್ಸ್ ಸ್ಕ್ವಾಡ್ ನಿನ್ನೆ ಸಂಜೆ ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ 146.88 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಮಂಜೇಶ್ವರ ಕುಂಜತ್ತೂರು ನಿಶಾಂತ್ ನಿವಾಸದ ಪ್ರಶಾಂತ್ ಬಿ. ಎಂಬಾತನನ್ನು ಬಂಧಿಸಿ ಆತನ ವಿರುದ್ಧ ಅಬಕಾರಿ ಪ್ರಕರಣ ದಾಖಲಿಸಿಕೊಂಡು ಆತನನ್ನು ಕುಂಬಳೆ ರೇಂಜ್ ಅಬಕಾರಿ ಕಚೇರಿಗೆ ಹಸ್ತಾಂತರಿಸಲಾಗಿದೆ. ಸ್ಪೆಷಲ್ ಸ್ಕ್ವಾಡ್‌ನ ಪ್ರಿವೆಂಟಿವ್ ಆಫೀಸರ್ ಕೆ.ವಿ. ರಂಜಿತ್‌ರ ನೇತೃತ್ವದಲ್ಲಿ ಅಬಕಾರಿ ಇಲಾಖೆಯ ಇತರ ಸಿಬ್ಬಂದಿಗಳಾದ …

ಕೆಲಸಕ್ಕೆಂದು ಮಹಾರಾಷ್ಟ್ರಕ್ಕೆ ಹೋದ ಯುವಕ ನಾಪತ್ತೆ

ಅಡೂರು: ಕೆಲಸಕ್ಕೆಂದು ಮಹಾರಾಷ್ಟ್ರಕ್ಕೆ ಹೋದ ಯುವಕ ನಾಪತ್ತೆಯಾದ ಬಗ್ಗೆ ಆದೂರು ಪೊಲೀಸರಿಗೆ ದೂರು ನೀಡಲಾಗಿದೆ. ಆದೂರು ಮಂಡೆಬೆಟ್ಟಿ ನಿವಾಸಿ  ನಾರಾಯಣ ಎಂಬವರ ಪುತ್ರ ರಮೇಶ (22) ನಾಪತ್ತೆಯಾದ ಯುವಕ. ಈ ಬಗ್ಗೆ ಸಹೋದರಿ ಶ್ಯಾಮಲ ನೀಡಿದ ದೂರಿನಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.  2025 ಜನವರಿ  23ರಂದು ಮಧ್ಯಾಹ್ನ 1.30ಕ್ಕೆ   ರಮೇಶ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗು ವುದಾಗಿ ತಿಳಿಸಿ ಮನೆಯಿಂದ ತೆರಳಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ. ಇತ್ತೀಚೆಗೆ ಇವರು ಮಂಗಳೂರಿಗೆ ತಲುಪಿರುವುದಾಗಿ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ …

ನ್ಯಾಯವಾದಿ ಮನೆಯಿಂದ ಕಳವು: ರಿಮಾಂಡ್‌ನಲ್ಲಿರುವ ಆರೋಪಿಯನ್ನು ಕಸ್ಟಡಿಗೆ ತೆಗೆದು ತನಿಖೆಗೆ ಪೊಲೀಸ್ ನಿರ್ಧಾರ

ಕುಂಬಳೆ: ನಾಯ್ಕಾಪು ನಿವಾಸಿ ನ್ಯಾಯವಾದಿ ಚೈತ್ರಾರ ಮನೆಯಿಂದ ಚಿನ್ನ, ಬೆಳ್ಳಿ ಆಭರಣ ಹಾಗೂ ಹಣ ಕಳವು ನಡೆಸಿದ ಪ್ರಕರಣದಲ್ಲಿ ಸೆರೆಗೀಡಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಕಲಂದರ್ ಇಬ್ರಾಹಿಂ ಎಂಬಾತನನ್ನು ಕಸ್ಟಡಿಗೆ ತೆಗೆದು ಹೆಚ್ಚಿನ ತನಿಖೆ ನಡೆಸುವ ಅಗತ್ಯವಿದೆಯೆಂದು ಕುಂಬಳೆ ಪೊಲೀಸರು ತಿಳಿಸಿದ್ದಾರೆ. ಆದ್ದರಿಂದ ಆರೋಪಿಯನ್ನು ಕಸ್ಟಡಿಗೆ ತೆಗೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಕಳವು ಪ್ರಕರಣದಲ್ಲಿ ಈತ ಮಾತ್ರವಲ್ಲದೆ ಬೇರೆ ಯಾರಾದರೂ ಶಾಮೀಲಾಗಿದ್ದಾರೆಯೇ ಎಂದು ತಿಳಿಯಬೇಕಾಗಿದೆ. ಅಲ್ಲದೆ ಮನೆಯಿಂದ ಕಳವು ನಡೆಸಿದ ಚಿನ್ನ, ಬೆಳ್ಳಿ …

ಬ್ಯಾಂಕ್ ನೌಕರ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಹೊಸದುರ್ಗ: ಪುಲ್ಲೂರು ಸೇವಾ ಸಹಕಾರಿ ಬ್ಯಾಂಕ್ ನೌಕರ ಎಂ. ನಿಧೀಶ್ (35) ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪುಲ್ಲೂರು ಕೊಡವಳಂ ಪಟ್ಟರ್‌ಕಂಡಂ ನಿವಾಸಿಯಾಗಿದ್ದಾರೆ. ನಿನ್ನೆ ಸಂಜೆ ೬ ಗಂಟೆಗೆ ಕಾಞಂಗಾಡ್ ಕುಶಾಲನಗರ ಕಲ್ಲಂಚಿರ ರೈಲ್ವೇ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸಂಬಂಧಿಕರು, ಗೆಳೆಯರು ತಲುಪಿ ಮೃತದೇಹದ ಗುರುತುಹಚ್ಚಿ ದ್ದಾರೆ. ಆರ್ಥಿಕ ಸಂದಿಗ್ಧತೆ ಹಿನ್ನೆಲೆಯಲ್ಲಿ ನಿಧೀಶ್ ಆತ್ಮಹತ್ಯೆಗೈದಿರಬೇಕೆಂದು ಶಂಕಿಸಲಾಗುತ್ತಿದೆ. ಹೊಸದುರ್ಗ ಪೊಲೀಸರು ಕೇಸು ದಾಖಲಿಸಿದ್ದಾರೆ. ದಿ| ನಿಟ್ಟೂರು ಕುಂಞಿರಾಮನ್- ಬಾಲಾಮಣಿ ದಂಪತಿ ಪುತ್ರನಾದ ನಿಧೀಶ್ ಪತ್ನಿ ವೀಣ, …

ಶಬರಿಮಲೆ ಚಿನ್ನ ಕಳವು: ಕಾಂಗ್ರೆಸ್‌ನಿಂದ ಕಲೆಕ್ಟರೇಟ್ ಮಾರ್ಚ್, ಘರ್ಷಣೆ

ಕಾಸರಗೋಡು: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣದ ಆರೋಪಿಗಳನ್ನು ಸೆರೆಹಿಡಿದು ಜೈಲಿಗಟ್ಟಬೇಕೆಂಬ ಪ್ರಧಾನ ಬೇಡಿಕೆ ಮುಂದಿರಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ನಿನ್ನೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಮಾರ್ಚ್ ನಡೆಸಿದರು. ಕಲೆಕ್ಟರೇಟ್  ಬಳಿ ದಾರಿಯಲ್ಲಿ ಪೊಲೀಸರು ನಿರ್ಮಿಸಿದ್ದ ಬಾರಿಕೇಡನ್ನು ದೂಡಿಹಾಕಿ ಕಾರ್ಯಕರ್ತರು ಮುನ್ನುಗ್ಗಲೆತ್ನಿಸಿದಾಗ ಅವರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿ ದರು. ಆಗ ಅಲ್ಲಿ ಘರ್ಷಣೆಯ ವಾತಾವರಣ ನಿರ್ಮಾಣವಾಯಿತು. ಕಾರ್ಯಕರ್ತರು ರಾಜ್ಯ  ಸರಕಾರದ ವಿರುದ್ಧ ಮುಗಿಲು ಮುಟ್ಟುವ ಘೋಷಣೆಯನ್ನು ಮೊಳಗಿಸಿದರು. ಮಾರ್ಚ್‌ನ್ನು ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ …

ಕಾಞಂಗಾಡ್‌ನಲ್ಲಿ ಸೆಂಚುರಿ ವೆಡ್ಡಿಂಗ್ ಸೆಂಟರ್ ಉದ್ಘಾಟನೆ ನಾಳೆ

ಹೊಸದುರ್ಗ: 1 ಲಕ್ಷ ಸ್ಕ್ವಾರ್ ಫೀಟ್‌ನಲ್ಲಿ ಉತ್ತರಕೇರಳದ ಅತ್ಯಂತ ದೊಡ್ಡ ಬ್ರೈಡಲ್ ಫ್ಯಾಶನ್ ಶೋರೂಂ ಆದ ಸೆಂಚುರಿ ವೆಡ್ಡಿಂಗ್ ಸೆಂಟರ್ ಕಾಞಂಗಾಡ್‌ನಲ್ಲಿ ನಾಳೆ ಚಟುವಟಿಕೆ ಆರಂಭಿಸಲಿದೆ. ನಾಲ್ಕು ದಶಕಗಳಿ ಗಿಂತಲೂ ಹೆಚ್ಚಾಗಿ ಫ್ಯಾಶನ್ ರಂಗದಲ್ಲಿ ಅನುಭವ ಸಂಪತ್ತು, ಪರಂಪರೆ, ವಿಶ್ವಾಸ ವಾಗಿದೆ  ಉತ್ತರಕೇರಳದ ಅತ್ಯಂತ ದೊಡ್ಡ ಬ್ರೈಡಲ್ ಶೋರೂಂ ಕಾಞಂಗಾಡ್‌ನಲ್ಲಿ ಆರಂಭಿಸಲು ಸೆಂಚುರಿಗೆ ಪ್ರೇರಣ ಶಕ್ತಿಯಾಗಿರುವುದು. ಎಲ್ಲಾ ವಿಧದ ಬ್ರೈಡಲ್ ಫ್ಯಾಶನ್‌ಗಳು, ವೆಡ್ಡಿಂಗ್ ಸಾರಿಗಳು, ಲೆಹಂಗಗಳು ಎಂಬಿವುಗಳ ನೂತನ ಸಂಗ್ರಹ, ಅಲ್ಲದೆ ಪ್ರತ್ಯೇಕ ಸೆಕ್ಷನ್ ಇಲ್ಲಿ ಸಿದ್ಧಪಡಿಸಲಾ …

ಶಾಂತಿಪಳ್ಳದ ಸುಬೈರ್‌ರ ಮನೆಯಿಂದ ಕಳವು: ಎರಡು ವರ್ಷವಾದರೂ ಆರೋಪಿಗಳ ಸೂಚನೆ ಇನ್ನೂ ಅಲಭ್ಯ

ಕುಂಬಳೆ: ನಾಯ್ಕಾಪು ನಿವಾಸಿ ನ್ಯಾಯವಾದಿ ಮನೆಯಿಂದ ಕಳವು ನಡೆಸಿದ ಆರೋಪಿಯನ್ನು ಪೊಲೀಸರು ಹೆಚ್ಚಿನ ತನಿಖೆಗೊಳಪಡಿಸುವುದರೊಂದಿಗೆ ತನ್ನ ಮನೆಯಿಂದ ನಡೆದ ಕಳವು ಬಗ್ಗೆ ಸೂಚನೆ ಲಭಿಸಬಹದೇ ಎಂಬ ನಿರೀಕ್ಷೆಯನ್ನು ಶಾಂತಿಪಳ್ಳದ ಸುಬೈರ್ ವ್ಯಕ್ತಪಡಿಸಿದ್ದಾರೆ. 2024 ಮಾರ್ಚ್ 25ರಂದು ಸುಬೈರ್‌ರ ಮನೆಯಿಂದ ಕಳವು ನಡೆದಿತ್ತು. ಮನೆಯ ಬಾಗಿಲು ಮುರಿದು ಒಳನುಗ್ಗದ ಕಳ್ಳರು ಕಪಾಟಿನಲ್ಲಿಟ್ಟಿದ್ದ 25 ಪವನ್ ಚಿನ್ನಾಭರಣ, 450 ದಿರ್ಹಾಂ, 5 ಹೊಸ ಟಿ ಶರ್ಟ್‌ಗಳು, 1 ಭಾರೀ ಮೌಲ್ಯದ ಶೂ ಮೊದಲಾದವುಗಳನ್ನು ಕಳ್ಳರು ದೋಚಿದ್ದರು. ಕಳವು ನಡೆದು ಎರಡು …

ರಾಜ್ಯ ಬಜೆಟ್ ನಾಳೆ ಮಂಡನೆ: ಹಲವು ಮಹತ್ತರ ಜನಕಲ್ಯಾಣ ಯೋಜನೆಗಳ ಘೋಷಣೆ ಸಾಧ್ಯತೆ

ತಿರುವನಂತಪುರ: ಪಿಣರಾಯಿ ವಿಜಯನ್ ನೇತೃತ್ವದ ಎರಡನೇ  ಸರಕಾರದ ಕೊನೆಯ ಬಜೆಟ್‌ನ್ನು ವಿಧಾನಸಭೆಯಲ್ಲಿ ರಾಜ್ಯ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲನ್ ನಾಳೆ ಬೆಳಿಗ್ಗೆ 9ಕ್ಕೆ ಮಂಡಿಸುವರು. ಇದು 2026-27ನೇ ಆರ್ಥಿಕ ವರ್ಷದ ಬಜೆಟ್ ಆಗಿದೆ. ರಾಜ್ಯ ವಿಧಾನಸಭೆಗೆ ಎಪ್ರಿಲ್‌ನಲ್ಲಿ ಚುನಾವಣೆ ನಡೆಯಲಿರುವ ಸಾಧ್ಯತೆಯನ್ನು ಮುಂದಕ್ಕೆ ಕಂಡುಕೊಂಡು ಜನರನ್ನು ತಮ್ಮತ್ತ ಆಕರ್ಷಿಸುವಂತೆ ಮಾಡಲು ಹಲವು ಜನಕಲ್ಯಾಣ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸುವ ಸಾಧ್ಯತೆ ಇದೆ. ಕೇಂದ್ರ ಬಜೆಟ್ ಮಂಡನೆಯ ಮೊದಲೇ ಈ ಬಾರಿ ರಾಜ್ಯ ಬಜೆಟ್ ಮಂಡಿಸಲಾಗುತ್ತಿದೆ ಎಂಬ ವಿಶೇಷತೆಯೂ ಇದಕ್ಕಿದೆ. …

ಅಪಘಾತದಲ್ಲಿ ಗಾಯಗೊಂಡ ಬ್ಯಾಂಕ್ ನೌಕರನ ಚಿಕಿತ್ಸೆಗೆ ಧನಸಹಾಯ ಹಸ್ತಾಂತರ

ಬದಿಯಡ್ಕ: ಕೇರಳ ಗ್ರಾಮೀಣ ಬ್ಯಾಂಕ್ ಮಾರ್ಪನಡ್ಕ ಶಾಖೆಯ ನೌಕರ, ಕುಂಟಿಕಾನ ಶ್ರೀ ಭಾರತಾಂಬ ಸೇವಾ ಟ್ರಸ್ಟ್‌ನ ಸದಸ್ಯ, ಸಾಮಾಜಿಕ ಕಾರ್ಯಕರ್ತ ನೀರ್ಚಾಲು ದೇವರಮೆಟ್ಟು ನಿವಾಸಿ ನಳಿನಾಕ್ಷನ್‌ರ ಚಿಕಿತ್ಸಾ ಸಹಾಯಕ್ಕಾಗಿ ಮೊತ್ತ ಹಸ್ತಾಂತರಿಸಲಾಯಿತು. ಅಪಘಾತದಲ್ಲಿ ಗಾಯಗೊಂಡ ನಳಿನಾಕ್ಷನ್ ಮಂಗಳೂರು ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದು, ದೊಡ್ಡ ಮೊತ್ತ ವೆಚ್ಚವಾಗಲಿದ್ದು ಈ ಹಿನ್ನೆಲೆಯಲ್ಲಿ ಸಹಾಯ ನೀಡಲಾಗಿದೆ. ದುರ್ಗಾ ಫ್ರೆಂಡ್ಸ್ ಕ್ಲಬ್ ಅಗಲ್ಪಾಡಿ ಸಂಗ್ರಹಿಸಿದ ಮೊತ್ತವನ್ನು ಬದಿಯಡ್ಕ ಪಂಚಾಯತ್ ಅಧ್ಯಕ್ಷ ಡಿ. ಶಂಕರ, ವಾರ್ಡ್ ಪ್ರತಿನಿಧಿ ಶ್ಯಾಮ್‌ಪ್ರಸಾದ್ ಸರಳಿ ಇವರ ಉಪಸ್ಥಿತಿಯಲ್ಲಿ ಶ್ರೀಭಾರತಾಂಬ …